ಮಹಾ ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 10 ಭಕ್ತರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸಂಭವಿಸಿದೆ.
ಪ್ರಯಾಗ್ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್ಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದ್ದು, ೧೯ ಮಂದಿ ಗಾಯಗೊಂಡಿದ್ದಾರೆ.
ಕುಂಭಮೇಳದಲ್ಲಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮತ್ತು ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.