ಸುರಪುರ : ಕೆಎಸ್ ಆರ್ ಟಿಸಿ ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಮದ್ಯಾಹ್ನ 11:40 ರ ಸುಮಾರಿಗೆ ಜರುಗಿದೆ.
ಪರಸಪ್ಪ ತಂದೆ ದ್ಯಾವಪ್ಪ ಹುಣಸ್ಯಾಳ ರವರ 2 ವರ್ಷದ ಮಗು ಲಕ್ಷ್ಮಿ ಮೃತ ಬಾಲಕಿಯಾಗಿದ್ದಾಳೆ
ಕೂಡಲಗಿ ಗ್ರಾಮದಿಂದ ಸುರಪುರಕ್ಕೆ ಹೊರಟಿರುವ KA 33 F 0346 ಬಸ್ ನ ಎರಡು ಚಕ್ರಗಳು ಮಗುವಿನ ಮೇಲೆ ಹರಿದಿದ್ದು ದೇಹ ಛಿದ್ರ ಛಿದ್ರಗೊಂಡಿದೆ.
ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


