Menu

ಮನಗೂಳಿ ಕೆನರಾ ಬ್ಯಾಂಕ್ ಶಾಖೆಯಿಂದ 59 ಕೆಜಿ ಚಿನ್ನಾಭರಣ ಕಳವು

ವಿಜಯಪುರ ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕ್ ಶಾಖೆಯಿಂದ 53 ಕೋಟಿ ರೂ. ಮೌಲ್ಯದ 59 ಕೆಜಿ ಚಿನ್ನಾಭರಣಗಳನ್ನು ಕಳ್ಳರು ಕೆಲವು ದಿನಗಳ ಹಿಂದೆ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಬ್ಯಾಂಕಿನಿಂದ ಸಾಲ ಪಡೆದು ಗ್ರಾಹಕರು ಅಡಮಾನ ಇಟ್ಟಿದ್ದ ಚಿನ್ನವನ್ನು ದುಷ್ಕರ್ಮಿಗಳು ಕದ್ದಿದ್ದಾರೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರ್ಗಿ ಮಾಹಿತಿ ನೀಡಿದ್ದಾರೆ.

ಮೇ 23ರಂದು ಸಂಜೆ ಬ್ಯಾಂಕ್‌ಗೆ ಬೀಗ ಹಾಕಿ ಸಿಬ್ಬಂದಿ ತೆರಳಿದ್ದು, ಮೇ 24 ಮತ್ತು 25 ರಂದು (ಶನಿವಾರ ಮತ್ತು ಭಾನುವಾರ) ರಜೆ ಇತ್ತು. ಮೇ 26ರಂದು ಸೋಮವಾರ ಸಿಬ್ಬಂದಿ ಬ್ಯಾಂಕ್ ಗೆ ಬಂದಿದ್ದು ಸ್ವಚ್ಛತಾ ಸಿಬ್ಬಂದಿ ಸ್ವಚ್ಛಗೊಳಿಸುವ ವೇಳೆ ಶಟರ್ ಬೀಗಗಳನ್ನು ಕತ್ತರಿಸಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮೇ 26ರಂದು ಕೆನರಾ ಬ್ಯಾಂಕ್ ಮನಗೂಳಿ ಶಾಖೆಯ ವ್ಯವಸ್ಥಾಪಕರು ನೀಡಿದ ದೂರು ಆಧರಿಸಿ ಪರಿಶೀಲನೆ ನಡೆಸಿದ್ದು 59 ಕೆಜಿ ಚಿನ್ನವನ್ನು ಕಳವು ಮಾಡಿರುವುದು ದೃಢಪಟ್ಟಿದೆ. ಇದರ ಮೌಲ್ಯ 53 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಕರಣದ ತನಿಖೆಗಾಗಿ 8 ತಂಡಗಳನ್ನು ರಚಿಸಲಾಗಿದೆ ಎಂದು ನಿಂಬರ್ಗಿ ಹೇಳಿದ್ದಾರೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *