ಕಲಬುರಗಿಯಲ್ಲಿ ಜೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಶೇಖರ ಬಹುರೂಪಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗಂಗಾ ಕಲ್ಯಾಣ ಸ್ಕೀಂ ಬಿಲ್ ಮಂಜೂರಾತಿ ಹಾಗೂ ಟಿಸಿ ಕೊಡಲು ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಜೆಸ್ಕಾಂ ಇಂಜಿನಿಯರ್ ಶೇಖರ ಬಹುರೂಪಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿಯ ತನ್ನ ಕಚೇರಿಯಲ್ಲಿ ಕಾಂಟ್ರಾಕ್ಟ್ ರ ಸಾಯಿಬಣ್ಣ ಪೂಜಾರಿ ಅವರಿಂದ ಎರಡು ಲಕ್ಷ ರೂಪಾಯಿ ಲಂಚ ಪಡೆಯುವಾಗ ಕಲಬುರಗಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.