ಬೆಂಗಳೂರು: ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಲಾ 10 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದೆ.
ಕಾಲ್ತುಳಿತ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದ ಆರ್ ಸಿಬಿ ಗುರುವಾರ ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಹಾಗೂ ಗಾಯಗೊಂಡವರ ಚಿಕಿತ್ಸೆಗೆ ನೆರವು ಘೋಷಿಸಿದೆ.
ಎಕ್ಸ್ ಖಾತೆಯಲ್ಲಿ ಈ ವಿಷಯ ಪ್ರಕಟಿಸಿರುವ ಆರ್ ಸಿಬಿ ಕಾಲ್ತುಳಿತ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದು, ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಹಣಕಾಸಿನ ನೆರವು ನೀಡಲಾಗುವುದು ಹಾಗೂ ಗಾಯಗೊಂಡವರ ಚಿಕಿತ್ಸೆ ಜವಾಬ್ದಾರಿ ವಹಿಸುತ್ತೇವೆ. ಆರ್ ಸಿಬಿ ಅಭಿಮಾನಿಗಳು ಯಾವತ್ತೂ ನಮ್ಮ ಹೃದಯದಲ್ಲಿ ಸ್ಥಾನ ಪಡೆದಿರುತ್ತಾರೆ ಎಂದು ಟ್ವೀಟ್ ಮಾಡಿದೆ.
ಆರ್ ಸಿಬಿ ಅಹಮದಾಬಾದ್ ನಲ್ಲಿ ನಡೆದ ಫೈನಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಪ್ರಶಸ್ತಿ ಗೆದ್ದ ನಂತರ ಆಟಗಾರರು ತೆರೆದ ಬಸ್ ನಲ್ಲಿ ವಿಜಯೋತ್ಸವದ ಮೆರವಣಿಗೆ ನಡೆಸಬೇಕಿತ್ತು.
ಅನಾಹುತದ ಭೀತಿ ಅರಿತ ರಾಜ್ಯ ಸರ್ಕಾರ ತೆರೆದ ಬಸ್ ನಲ್ಲಿ ಮೆರವಣಿಗೆ ರದ್ದುಗೊಳಿಸಿತ್ತು. ಇದೇ ವೇಳೆ ಆರ್ ಸಿಬಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲ ಉಚಿತ ಪಾಸ್ ಮೂಲಕ ಕ್ರೀಡಾಂಗಣಕ್ಕೆ ಪ್ರವೇಶ ಕಲ್ಪಿಸುವುದಾಗಿ ಘೋಷಿಸಿತ್ತು.