ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಂಗೇರಿಯ ಮೈಲಸಂದ್ರದ ಬಳಿ ಮೆಟ್ರೋ ಪಿಲ್ಲರ್ಗೆ ಡಿಕ್ಕಿಯಾಗಿ ಗಾಯಗೊಂಡಿದ್ದ 12 ಮಂದಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಬಿಡದಿಯ ಜಯರಾಮ್ (57) ಮೃತ ವ್ಯಕ್ತಿ. ಕಳೆದ ಶುಕ್ರವಾರ ರಾತ್ರಿ ಮೆಟ್ರೋ ಪಿಲ್ಲರ್ಗೆ ಬಸ್ ಡಿಕ್ಕಿಯಾಗಿ ಡ್ರೈವರ್, ಕಂಡಕ್ಟರ್ ಸೇರಿ 12 ಮಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಪಘಾತಕ್ಕೀಡಾದ ಬಸ್ ಕೆ.ಆರ್ ಮಾರ್ಕೆಟ್ನಿಂದ ಬಿಡದಿಗೆ ಹೊರಟಿತ್ತು. ಈ ವೇಳೆ ಸ್ಟೇರಿಂಗ್ ಕಟ್ಟಾಗಿ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್ ಮೆಟ್ರೋ ಪಿಲ್ಲರ್ 607ಕ್ಕೆ ಡಿಕ್ಕಿಯಾಗಿತ್ತು. ಘಟನೆ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.