ಮಣಿಪುರದಲ್ಲಿ ಮೈತೇಯಿ ಸಮುದಾಯದ ಅರಂಬಾಯಿ ತೆಂಗೋಲ್ ಸಂಘಟನೆಯ ನಾಯಕನ ಬಂಧನದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ. ಗಲಭೆ ನಿಯಂತ್ರಣ ಕ್ರಮದ ಭಾಗವಾಗಿ ಜಿಲ್ಲೆಗಳ ಪ್ರಾದೇಶಿಕ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿಯಿಂದ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.
ಐದು ದಿನಗಳವರೆಗೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್, ಬಿಷ್ಣುಪುರ ಮತ್ತು ಕಕ್ಟಿಂಗ್ ಜಿಲ್ಲೆಗಳಲ್ಲಿ ವಿಎಸ್ಎಟಿ, ವಿಪಿಎನ್ ಸೇರಿದಂತೆ ಇಂಟರ್ನೆಟ್ ಹಾಗೂ ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಆದೇಶಿಸಲಾಗಿದೆ.
ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಜಾಲತಾಣ ಬಳಸಿಕೊಂಡು ದ್ವೇಷದ ವೀಡಿಯೊ ಪ್ರಸಾರ ಮಾಡಿ ಸಾರ್ವಜನಿಕರನ್ನು ಕೆರಳಿಸುವ ಸಾಧ್ಯತೆಯನ್ನು ತಪ್ಪಿಸಲುಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಆಯುಕ್ತ ಎನ್.ಅಶೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನಾಕಾರರು ಅರಂಬಾಯಿ ತೆಂಗೋಲ್ಗೆ ಸೇರಿದವರಾಗಿದ್ದು,ನಾಯಕನ ಬಿಡುಗಡೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ.ರಸ್ತೆಗಳಲ್ಲಿ ಟೈರ್ಗಳನ್ನು ಸುಟ್ಟು ಹಾಕಿದ್ದಾರೆ. ಇದೇ ಬಣ ಈ ಹಿಂದೆ ನಡೆದಿದ್ದ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಕುಕಿ ಗ್ರಾಮಗಳ ಮೇಲೆ ದಾಳಿ ಮಾಡಿರುವ ಆರೋಪವಿದೆ.