ನರೇಗಾ ಕಾರ್ಮಿಕರಿಗೆ ಕೂಲಿ ಪಾವತಿಸದ ರಾಯಚೂರು ಮಾನ್ವಿಯ ಸುಂಕೇಶ್ವರ ಗ್ರಾಮ ಪಂಚಾಯತಿ ಕಚೇರಿಗೆ ಗ್ರಾಮಸ್ಥರು ಬೇಲಿ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮಪಂಚಾಯತಿ ಕಚೇರಿ ಎದುರು ನೊಂದ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೇ ತಿಂಗಳಲ್ಲಿ ನರೇಗಾ ಯೋಜನೆ ಅಡಿ ನಾಲೆಯ ಹೂಳೆತ್ತುವ ಕಾಮಗಾರಿ ಮಾಡಲಾಗಿದೆ. ಈ ಕೆಲಸ ಮಾಡಿದ ಕಾರ್ಮಿಕರಿಗೆ ಹಣ ಪಾವತಿ ಸಲು ನಿರಾಕರಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ಕೂಲಿ ಕಾರ್ಮಿಕರು ಪಂಚಾಯತಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ದರೂ ಯಾವುದೇ ಅಧಿಕಾರಿಗಳು ಬಾರದ ಕಾರಣ ಗ್ರಾಮಸ್ಥರು ಬೇಲಿ ಹಾಕಿದ್ದಾರೆ. ಪಂಚಾಯತಿ ಪಿಡಿಒ ಹಾಗೂ ಸಿಬ್ಬಂದಿ ವಿರುದ್ಧ ಕಾರ್ಮಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.