Menu

RCB Victory tragedy: ಆರ್‌ಸಿಬಿ ವಿಜಯೋತ್ಸವ ದುರಂತ-ಡಿಪಿಎಆರ್‌ ಕಾರ್ಯದರ್ಶಿಯ ನಿರ್ಲಕ್ಷ್ಯ ಕಾರಣವಾಯ್ತೇ?

rcb fans

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ಕಾಲ್ತುಳಿತ ದುರಂತಕ್ಕೆ ಕೆಎಸ್‌ಸಿಎ ತಪ್ಪು ಕಾರಣ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಸರ್ಕಾರದಿಂದಲೇ ತಪ್ಪಾಗಿದೆ ಎಂದು ಕೆಎಸ್‌ಸಿಎ ಹೇಳುತ್ತಿದೆ. ದುರಂತಕ್ಕೆ ಸಂಬಂಧಿಸಿದಂತೆ ಸತ್ಯ ಶೋಧನೆಗೆ ತನಿಖಾ ತಂಡಗಳು ಕಾರ್ಯಪ್ರವೃತ್ತವಾಗಿವೆ. ತನಿಖೆ ವೇಳೆ ಈ ದುರ್ಘಟನೆಗೆ ಡಿಪಿಎಆರ್‌ ಕಾರ್ಯದರ್ಶಿ ಸತ್ಯವತಿ ನಿರ್ಲಕ್ಷ್ಯವೇ ಕಾರಣ ಎಂಬುದು ಪತ್ತೆಯಾಗಿದೆ. ವಿಧಾನಸೌಧ ಭದ್ರತಾ ವಿಭಾಗ ಡಿಸಿಪಿ ಜೂನ್ 4ರಂದೇ ಅಪಾಯದ ಎಚ್ಚರಿಕೆ ನೀಡಿದ್ದರೂ ಡಿಪಿಎಆರ್‌ ನಿರ್ಲಕ್ಷ್ಯ ಮಾಡಿರುವುದು ಕಂಡುಬಂದಿದೆ ಎಂದು ಮಾಧ್ಯಮ ವರದಿ ಮಾಡಿದೆ..

ವಿಧಾನಸೌಧ ಭದ್ರತಾ ವಿಭಾಗದ ಡಿಸಿಪಿ ಕರಿಬಸವನ ಗೌಡ ಜೂನ್ 4ರಂದೇ ಡಿಪಿಎಆರ್‌ ಕಾರ್ಯದರ್ಶಿಗೆ ಪತ್ರ ಬರೆದು ಭದ್ರತೆಗೆ ಸಿಬ್ಬಂದಿ ಕೊರತೆ ಸೇರಿದಂತೆ ಅಪಾಯದ ಎಚ್ಚರಿಕೆ ನೀಡಿದ್ದರು.

ಜೂನ್ 3ರಂದು ಡಿಪಿಎಆರ್‌ ವಿಧಾನಸೌಧದಲ್ಲಿ ಆರ್‌ಸಿಬಿ ಆಟಗಾರರಿಗೆ ಸನ್ಮಾನ ಮಾಡಲು ಅನುಮತಿ ಕೇಳಿ ಭದ್ರತಾ ವಿಚಾರವಾಗಿ ಅಭಿಪ್ರಾಯ ನೀಡುವಂತೆ ಭದ್ರತಾ ವಿಭಾಗದ ಡಿಸಿಪಿಗೆ, ಅಧೀನ ಕಾರ್ಯದರ್ಶಿಗೆ ಪತ್ರ ಬರೆದಿದೆ. ಡಿಸಿಪಿ ಕರಿಬಸವನ ಗೌಡ ಅಂದೇ ಡಿಪಿಎಆರ್‌ ಕಾರ್ಯದರ್ಶಿಗೆ ಅಭಿಪ್ರಾಯ ತಿಳಿಸಿ ಮರುಪತ್ರ ಬರೆದಿದ್ದಾರೆ. ಅಪಾರ ಸಂಖ್ಯೆ ಯಲ್ಲಿ ಅಭಿಮಾನಿಗಳು ಬರುವ ಕಾರಣ ಭದ್ರತಾ ವಿಭಾಗದಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಭದ್ರತೆಗೆ ತೊಂದರೆಯಾಗುತ್ತದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಹೊರಗಡೆಯಿಂದ ಸಿಬ್ಬಂದಿ ಹಾಗೂ ಅಧಿಕಾರಿಗಳ ನಿಯೋಜನೆ ಮಾಡಿಕೊಳ್ಳಬೇಕು. ಹೀಗಾಗಿ ಕಾಲಾವಕಾಶ ಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಆದರೂ ಡಿಪಿಎಆರ್‌ ಕಾರ್ಯದರ್ಶಿ ಸತ್ಯವತಿ ಅವರು ಡಿಸಿಪಿ ಕರಿಬಸವನ ಗೌಡ ಅಪಾಯದ ಎಚ್ಚರಿಕೆಯನ್ನು ತಿರಸ್ಕರಿಸಿ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ. ಸ್ಟೇಡಿಯಂಗೆ ಹೋಗಿ ಅಂತ ಜೂನ್ ನಾಲ್ಕುರಂದು ಸತ್ಯವತಿ ಮಾಧ್ಯಮ ಹೇಳಿಕೆ ನೀಡಿದ್ದರು. ಇದರೊಂದಿಗೆ ಮೇಲ್ನೋಟಕ್ಕೆ ಡಿಪಿಎಆರ್‌ ಕಾರ್ಯದರ್ಶಿ ಸತ್ಯವತಿ ಅವರ ನಿರ್ಲಕ್ಷ್ಯ ಬಯಲಾಗಿದೆ.

ಪ್ರಕರಣ ಸಂಬಂಧ ಈಗಾಗಲೇ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ. ತನಿಖೆಗಾಗಿ ನಾಲ್ವರನ್ನೂ ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸಿದ್ಧತೆಯಲ್ಲಿದ್ದಾರೆ. ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿರುವಂತೆಯೇ ಮ್ಯಾಜಿಸ್ಟ್ರೇಟ್‌ ತನಿಖೆಯೂ ಚುರುಕುಗೊಂಡಿದೆ.

Related Posts

Leave a Reply

Your email address will not be published. Required fields are marked *