Menu

Accident Deaths: ಮದ್ದೂರಿನಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯ ಮದ್ದೂರಿನ ನಿಡಘಟ್ಟ ಬಳಿ ಭಾನುವಾರ ತಡ ರಾತ್ರಿ ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರು ಮೃತಪಟ್ಟುದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಸೂದ್ ಹಾಗೂ ಅಯಾನ್ ದುರಂತದಲ್ಲಿ ಮೃತಪಟ್ಟವರು. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ದಾಟಿ ಮಂಡ್ಯದ ಕಡೆಯಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಅಪಘಾತದ ಬಳಿಕ ಹೈವೇ ರಸ್ತೆಯನ್ನು ಬಂದ್ ಮಾಡಿ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಘಟನೆಯಲ್ಲಿ ಗಾಯಗೊಂಡವರಿಗೆ ಬೆಂಗಳೂರು ಹಾಗೂ ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Related Posts

Leave a Reply

Your email address will not be published. Required fields are marked *