Menu

Rain Landslide: ಮಳೆಯಿಂದ ಮಂಗಳೂರು‌ ಕೆತ್ತಿಕಲ್‌ ಗುಡ್ಡ ಕುಸಿತ: ರಸ್ತೆ ಬಂದ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮಂಗಳೂರು‌ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತ‌ವಾಗಿದೆ. ಗುಡ್ಡ ಕುಸಿದು ಒಂದು ಬದಿಯ ರಸ್ತೆ ಸಂಪೂರ್ಣ ಬಂದ್ ಆಗಿದೆ.

ರಾಷ್ಟ್ರೀಯ ಹೆದ್ದಾರಿ 169 ಸಂಪರ್ಕಿಸುವ ಮಂಗಳೂರು-ಮೂಡಬಿದ್ರೆ-ಕಾರ್ಕಳ ರಸ್ತೆ ಇದಾಗಿದ್ದು, ಬಂಡೆ ಕಲ್ಲುಗಳು ಉರುಳಿ ಬಿದ್ದಿವೆ. ವಾಹನ ಸವಾರರು ಆತಂಕದಲ್ಲೇ ಪ್ರಯಾಣ‌ ಮಾಡುತ್ತಿದ್ದಾರೆ. ಗುಡ್ಡದ ಮೇಲ್ಭಾಗದಲ್ಲಿ ನೂರಕ್ಕೂ ಹೆಚ್ಚು ಮನೆಗಳಿಗೆ ಅಪಾಯವಾಗುವ ಸಾಧ್ಯತೆ ಇದೆ. ಗುಡ್ಡದ ಪಕ್ಕದಲ್ಲಿಯೇ ಶಾಲೆಯೂ ಇದ್ದು ಭೀತಿ ಹೆಚ್ಚಿದೆ.

ಶೃಂಗೇರಿ ತಾಲೂಕಿನ ನೆಮ್ಮಾರು ಬಳಿ ಗುಡ್ಡ ಕುಸಿದು ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್ ಆಗಿದೆ. ಗುಡ್ಡ ಕುಸಿತಕ್ಕೆ ರಸ್ತೆಗೆ ಹಾಕಿದ್ದ ಕಬ್ಬಿಣದ ತಡೆಗೋಡೆ ಮುರಿದು ಬಿದ್ದಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ. ಕರಾವಳಿ ಜಿಲ್ಲೆಗಳು ,ಕೊಡಗು , ಚಿಕ್ಕಮಗಳೂರುಗಳಲ್ಲಿ ಮಳೆಯಾಗುತ್ತಿದ್ದು, ಗುಡ್ಡಗಳು ಕುಸಿದು ಸಂಚಾರಕ್ಕೆ ತೊಡಕಾಗಿ ಪರಿಣಮಿಸಿರುವುದು ವರದಿಯಾಗಿದೆ.

ಬೆಳಗಾವಿಯಲ್ಲಿ ನಿರಂತರ ಮಳೆಯಿಂದಾಗಿ ಖಾನಾಪೂರ ತಾಲೂಕಿನ ಕುಸಮಳಿ ಗ್ರಾಮದ ಬಳಿ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಸೇತುವೆ ಕೊಚ್ಚಿಕೊಂಡು ಹೋಗಿದೆ. ಇದರಿಂದ ವಾಹನ ಸಂಚಾರ ಬಂದ್‌ ಆಗಿದೆ.

 

Related Posts

Leave a Reply

Your email address will not be published. Required fields are marked *