ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ತೀವ್ರಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗದಲ್ಲಿ ರಾತ್ರಿ ಇಡೀ ಸುರಿದ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ಅಜ್ಜಿ ಬಲಿಯಾಗಿದ್ದಾರೆ. ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಹಲವು ಕಡೆಗಳಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಬಂದ್ ಆಗಿದ್ದು, ಕೆಲವೆಡೆ ಶಾಲೆಗಳಿಗೆ ರಜೆ ನೀಡಿದ್ದಾರೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಮಳೆ ಹೆಚ್ಚಾಗಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಶಿವಮೊಗ್ಗದಲ್ಲಿ ರಾತ್ರಿ ಇಡೀ ಸುರಿದ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಶತಾಯುಷಿ ಅಜ್ಜಿ ಬಲಿಯಾಗಿದ್ದಾರೆ. ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ.
ಆಡಗಡಿ ಗ್ರಾಮದ ಹೇಮಾವತಿ ಎಂಬವರ ಮನೆಯ ಗೋಡೆ ಮಳೆಯಿಂದಾಗಿ ತಡರಾತ್ರಿ ಕುಸಿದಿದೆ. ಮನೆಯಲ್ಲಿದ್ದ ಹೊನ್ನಾಳಿ ತಾಲೂಕಿನ ಕುಂಕೋವ ಗ್ರಾಮದ ಶತಾಯುಷಿ ಸಿದ್ದಮ್ಮ ಅಸು ನೀಗಿದ್ದಾರೆ. ಸಿದ್ದಮ್ಮ ಹೇಮಾವತಿಯವರ ಸಂಬಂಧಿ. ಹೇಮಾವತಿಯವರ ಮಗಳು ಪಲ್ಲವಿ, ಅಳಿಯ ಪರಶುರಾಮ್, ಮತ್ತು ಎರಡು ವರ್ಷದ ಮೊಮ್ಮಗ ಚೇತನ್ಗೆ ಗಾಯಗಳಾಗಿವೆ.