Menu

Rain Death: ಚಿಕ್ಕಮಗಳೂರಿನಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರ ಬಿದ್ದು ವ್ಯಕ್ತಿ ಸಾವು

ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡಿನಲ್ಲಿ ವ್ಯಾಪಕ ಮಳೆ ಇನ್ನೂ ಮುಂದುವರಿದಿದ್ದು, ಮಳೆಯಿಂದಾಗಿ ಸಾವಿನ ಸಂಖ್ಯೆ 4ಕ್ಕೇರಿದೆ. ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಎಲೆಕಲ್ ಘಾಟಿ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯನ್ನು ಬಾಳೆಹೊನ್ನೂರು ಸಮೀಪ ಬಿಳುಕೊಪ್ಪದ ಅನಿಲ್ ಪಾಯಸ್‌ (55) ಎಂದು ಗುರುತಿಸಲಾಗಿದೆ. ಮೃತ ಅನಿಲ್ ಬೈಕ್‌ನಲ್ಲಿ ಬಾಳೆಹೊನ್ನೂರಿಗೆ ಹೋಗುತ್ತಿದ್ದಾಗ ಎಲೆಕಲ್ ಘಾಟಿ ಬಳಿ ಹೋಗುವಾಗ ಗಾಳಿಮಳೆಗೆ ಮರ ಬಿದ್ದು ಗಾಯಗೊಂಡಿದ್ದರು.

ಸ್ಥಳಕ್ಕೆ ಬಾಳೆಹೊನ್ನೂರು ಪಿಎಸ್‌ಐ ರವೀಶ್ ಭೇಟಿ ನೀಡಿ, ಅಗ್ನಿಶಾಮಕ ವಾಹನದಲ್ಲೇ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದರೂ ತಲೆಗೆ ಭಾರೀ ಪೆಟ್ಟು ಬಿದ್ದ ಪರಿಣಾಮ ಮಾರ್ಗ ಮಧ್ಯೆ ಅಸು ನೀಗಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೂ ಮುನ್ನ ಸಿಡಿಲು ಬಡಿದು ಇಬ್ಬರು ಹಾಗೂ ಮರಬಿದ್ದು ಒಬ್ಬ ಮೃತಪಟ್ಟಿದ್ದರು.

Related Posts

Leave a Reply

Your email address will not be published. Required fields are marked *