ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿಕೆ ಸುರೇಶ್ ಗೆ ಐಶ್ವರ್ಯ ಗೌಡ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಸ್ವತಃ ಡಿಕೆ ಸುರೇಶ್ ಈ ವಿಷಯ ತಿಳಿಸಿದ್ದು, ಜೂನ್ 19ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ ಎಂದು ಹೇಳಿದರು.
ಜೂನ್ 19ರ ಬದಲು ಜೂನ್ 23ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಇಡಿ ಬಳಿ ಮನವಿ ಮಾಡಿಕೊಂಡಿದ್ದೇನೆ ಎಂದು ಅವರು ವಿವರಿಸಿದರು.
ಡಿಕೆ ಸೋದರಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಮಾಡಿರುವ ಪ್ರಕರಣದಲ್ಲಿ ಡಿಕೆ ಸುರೇಶ್ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಐಶ್ವರ್ಯ ಗೌಡ ಜೊತೆ ನಾನು ಯಾವುದೇ ವ್ಯವಹಾರ ಮಾಡಿಲ್ಲ. ಆಕೆ ಎರಡು ಕಾರ್ಯಕ್ರಮಗಳಿಗೆ ಕರೆದಿದ್ದಾಗ ಹೋಗಿದ್ದೆ ಅಷ್ಟೆ ಎಂದು ಅವರು ಹೇಳಿದರು.