ಮಂಗಳೂರಿನ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಹೆದ್ದಾರಿ ತಡೆಗೋಡೆಗೆ ಕಾರು ಬಡಿದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಎನ್ಎಸ್ ಯುಐ ಮುಖಂಡ ಓಂ ಶ್ರೀ ಹಾಗೂ ಕದ್ರಿ ನಿವಾಸಿ ಅಮನ್ ರಾವ್ ಮೃತ ಯುವಕರು. ಚಾಲಕನ ಅತಿ ವೇಗದಿಂದ ತಡೆಗೋಡೆಗೆ ಬಡಿದ ಕಾರು ಅಪ್ಪಚ್ಚಿಯಾಗಿ ಹೋಗಿದೆ.
ಐವರು ಯುವಕರಿದ್ದ ಕಾರು ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿರುವಾಗ ಈ ದುರಂತ ನಡೆದಿದೆ. ಘಟನೆಯಲ್ಲಿ ವಂಶಿ ಮತ್ತು ಆಶಿಕ್ ಗೆ ಗಂಭೀರ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಟಲಿ ಮೂಲದ ಜೆರ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ಇಬ್ಬರು ಯುವಕರು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.