Menu

ತಾಂತ್ರಿಕ ದೋಷ: ಇಂಡಿಗೊ ವಿಮಾನ ತುರ್ತು ಭೂಸ್ಪರ್ಶ

ದೆಹಲಿಯಿಂದ ಲೇಹ್​ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ದೆಹಲಿಯಲ್ಲೇ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ವಿಮಾನದಲ್ಲಿ 180 ಪ್ರಯಾಣಿಕರಿದ್ದರು. ವಿಮಾನದಲ್ಲಿ ಯಾವ ತಾಂತ್ರಿಕ ದೋಷ ಕಂಡುಬಂದಿದೆ ಎಂಬುದರ ಕುರಿತು ಇಂಡಿಗೋ ಮಾಹಿತಿಯನ್ನು ನೀಡಿಲ್ಲ.

ರಾಯ್‌ಪುರ ವಿಮಾನ ನಿಲ್ದಾಣದಲ್ಲಿ ಬುಧವಾರ ತಾಂತ್ರಿಕ ದೋಷ ಉಂಟಾಗಿ ದೆಹಲಿ-ರಾಯ್‌ಪುರ ಇಂಡಿಗೊ ವಿಮಾನದ ಬಾಗಿಲು ಜಾಮ್ ಆಗಿ 40 ನಿಮಿಷ ಪ್ರಯಾಣಿಕರು ವಿಮಾನದೊಳಗೆ ಸಿಲುಕಿಕೊಂಡಿದ್ದರು. ಮಧ್ಯಾಹ್ನ 2.25 ಕ್ಕೆ ನಿಗದಿತ ಸಮಯಕ್ಕೆ ಇಳಿದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿ ಕೊಂಡು ನಿರ್ಗಮನ ದ್ವಾರ ಜಾಮ್ ಆಗಿ ಇಳಿಯುವ ಪ್ರಕ್ರಿಯೆ ವಿಳಂಬವಾಯಿತು. ಪ್ರಯಾಣಿಕರು ಅರ್ಧ ಗಂಟೆಗೂ ಹೆಚ್ಚು ಕಾಲ ಕ್ಯಾಬಿನ್‌ನಲ್ಲಿ ಕುಳಿತಿದ್ದರು.

ಮಂಗಳವಾರ ಕೊಚ್ಚಿಯಿಂದ ದೆಹಲಿಗೆ ಹೋಗುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಬೆಳಗ್ಗೆ 9.31ಕ್ಕೆ ಕೊಚ್ಚಿಯಿಂದ ವಿಮಾನ ಹೊರಟ ಕೂಡಲೇ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ವಿಮಾನದಲ್ಲಿ 157 ಪ್ರಯಾಣಿಕರು ಮತ್ತು 6 ಸಿಬ್ಬಂದಿ ಇದ್ದರು.
ಸೋಮವಾರ ಗೋವಾದಿಂದ ಲಕ್ನೋಗೆ ಹೊರಟಿದ್ದ ಇಂಡಿಗೋ ವಿಮಾನವು ಹವಾಮಾನ ಬದಲಾವಣೆಯಿಂದಾಗಿ ಟೇಕಾಫ್ ಆದ ಸ್ವಲ್ಪ ಸಮಯದ ಹವಾಮಾನ ವೈಪರೀತ್ಯದಿಂದ ಸುರಕ್ಷಿತವಾಗಿ ಲ್ಯಾಂಡ್‌ ಆಯಿತು.

Related Posts

Leave a Reply

Your email address will not be published. Required fields are marked *