ಇರಾನ್– ಇಸ್ರೇಲ್ ನಡುವಿನ ಸಂಘರ್ಷ ಹೆಚ್ಚುತ್ತಲೇ ಇದೆ. ಯುದ್ಧ ಪೀಡಿತ ಇರಾನ್ನಿಂದ 11 ಕನ್ನಡಿಗರನ್ನು ಆಪರೇಷನ್ ಸಿಂಧು ಕಾರ್ಯಾಚರಣೆ ಮೂಲಕ ಸುರಕ್ಷಿತವಾಗಿ ದೇಶಕ್ಕೆ ಕರೆತರಲಾಗಿದೆ.
ಶನಿವಾರ ಮಧ್ಯರಾತ್ರಿ ಟೆಹ್ರಾನ್ ನಿಂದ ದೆಹಲಿಗೆ 11 ಕನ್ನಡಿಗರು ಆಗಮಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ತಲುಪಲಿದ್ದಾರೆ. ವಿದ್ಯಾರ್ಥಿಗಳ ವಿಮಾನ ಪ್ರಯಾಣದ ವೆಚ್ಚವನ್ನು ಕರ್ನಾಟಕ ಸರ್ಕಾರ ಭರಿಸಲಿದೆ.
ಜೂ.19ರಂದು ಇರಾನ್ನಿಂದ ಹೊರಟಿದ್ದ 110 ವಿದ್ಯಾರ್ಥಿಗಳು ಇರಾನ್ನಿಂದ ಅರ್ಮೇನಿಯಾದ ಮೂಲಕ ದೆಹಲಿಗೆ ಬಂದಿಳಿದಿದ್ದರು. ಅದರಲ್ಲಿ ಉತ್ತರ ಭಾರತದ ಹಲವು ರಾಜ್ಯಗಳ ವಿದ್ಯಾರ್ಥಿಗಳಿದ್ದರು. ಅದೇ ದಿನ ಐದು ಮಂದಿ ಕನ್ನಡಿಗರು ವಾಪಸ್ ಆಗಿದ್ದರು.
ಬಿ-ಪ್ಯಾಕ್ ಸದಸ್ಯರ ಕನ್ನಡಿಗರ ತಂಡ ಅಧ್ಯಯನ ಪ್ರವಾಸಕ್ಕೆ ಹೋಗಿತ್ತು. ಇಸ್ರೇಲ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದ ಕಾರಣ ಅಲ್ಲೇ ಉಳಿದಿದ್ದರು. ಈಗಾಗಲೇ ಈ ತಂಡ ಕರ್ನಾಟಕಕ್ಕೆ ವಾಪಸ್ ಆಗಿದೆ. ಇಸ್ರೇಲ್ ಪರ ಅಮೆರಿಕ ಯುದ್ಧ ಆರಂಭಿಸಿದ್ದು, ಇರಾನ್ನ ಮೂರು ಪರಮಾಣು ಕೇಂದ್ರಗಳ ಮೇಲೆ ದಾಳಿ ನಡೆಸಿದೆ.