ನೆಲಮಂಗಲ ಬಳಿಯ ಬಿನ್ನಮಂಗಲ ಅರಿಶಿನಕುಂಟೆ ಗ್ರಾಮದಲ್ಲಿ ಬಿಎಂಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಚಾಲಕ ಬಸ್ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಬೈಕ್ ಸವಾರ ರವಿಚಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಹಿಂಬದಿಯಲ್ಲಿ ಕೂತಿದ್ದ ಸವಿತಾ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರವಿಚಂದ್ರ ಮಗಳ ಹುಟ್ಟು ಹಬ್ಬಕ್ಕೆ ತೆರಳುವಾಗ ಈ ದುರಂತ ಸಂಭವಿಸಿದೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.