Menu

Murder: ಕಲಬುರಗಿಯಲ್ಲಿ ಢಾಬಾಗೆ ನುಗ್ಗಿ ಮೂವರ ಕೊಚ್ಚಿ ಕೊಲೆ

ಕಲಬುರಗಿಯ ಹೊರವಲಯದ ಪಟ್ನಾ ಗ್ರಾಮದಲ್ಲಿ ಢಾಬಾವೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಇವರು ಮೂವರು ಸಂಬಂಧಿಕರಾಗಿದ್ದು, ಡಾಬಾ ನಡೆಸುತ್ತಿದ್ದರು. ಢಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ದುಷ್ಕರ್ಮಿಗಳು ಮೂವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹಳೆಯ ವೈಷಮ್ಯದಿಂದ ಕೊಲೆ ನಡೆದಿದೆ ಎನ್ನಲಾಗಿದೆ.

ಕೊಲೆ ಬಳಿಕ ಹಂತಕರು ಸಾಕ್ಷ್ಯ ಸಿಗಬಾರದು  ಎಂದು ಅಲ್ಲಿದ್ದ  ಸಿಸಿಟಿವಿಯ ಹಾರ್ಡ್ ಡಿಸ್ಕ್ ಒಯ್ದು ಪರಾರಿಯಾಗಿದ್ದಾರೆ. ಅಕ್ಕ ಪಕ್ಕದಲ್ಲಿರುವ ಸಿಸಿಟಿವಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಈ ಸಂಬಂಧ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದು,  ತನಿಖೆಯ ಬಳಿಕ ಹಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Related Posts

Leave a Reply

Your email address will not be published. Required fields are marked *