Menu

Heart Attack: ಜಮಖಂಡಿಯಲ್ಲಿ ಪಾಠ ಮಾಡುವಾಗಲೇ ಕುಸಿದು ಶಿಕ್ಷಕ ಸಾವು

ಬಾಗಲಕೋಟೆಯ ಜಮಖಂಡಿಯಲ್ಲಿರುವ ತುಂಗಳ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ.

ಮಕ್ಕಳು ಹಾಗೂ ಯುವಜನರು ಇದ್ದಕ್ಕಿದ್ದಂತೆ ಕುಸಿದು ಸಾವಿಗೀಡಾಗುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ಪ್ರತಿ ದಿನ ವರದಿಯಗುತ್ತಲೇ ಇವೆ. ಈ ಬಗ್ಗೆ ಅಧ್ಯಯನ ನಡೆಸಿದ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಜೀವನಶೈಲಿ, ಮಾದಕ ದ್ರವ್ಯ ಸೇವನೆ ಸೇರಿದಂತೆ ಹಲವು ಕಾರಣಗಳನ್ನು ಮುಂದಿಟ್ಟಿದೆ. ಕೊರೋನ ವ್ಯಾಕ್ಸಿನ್‌ ಗೂ ಇದಕ್ಕೂ ಸಂಬಂಧ ಇಲ್ಲ ಎಂದು ತಿಳಿಸಿದೆ.

ಈ ಮಧ್ಯೆ ಹಾಸನದಲ್ಲಿ ೨೨ ವರ್ಷದ ಯುವತಿ ಕುಸಿದು ಮೃತಪಟ್ಟರೆ ಬಾಗಲಕೋಟೆಯ ಜಮಖಂಡಿಯಲ್ಲಿರುವ ತುಂಗಳ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ.

ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ನಿವಾಸಿ ಗುರುಪಾದ ಕಾಶಿರಾಯ ಹಿಪ್ಪರಗಿ (೪೨) ಮೃತ ಶಿಕ್ಷಕ. ಇವರು ತುಂಗಳ ಖಾಸಗಿ ಪ್ರೌಢ ಶಾಲೆಯಲ್ಲಿ ಕನ್ನಡ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು.

Related Posts

Leave a Reply

Your email address will not be published. Required fields are marked *