Menu

ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ

ಆಷಾಢ ಶುಕ್ರವಾರ ಹಿನ್ನೆಲೆ ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ ಹರಿದು ಬಂದಿದೆ. ಚಾಮುಂಡೇಶ್ವರಿಗೆ ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ಆರಂಭಗೊಂಡಿದ್ದು, 6 ಗಂಟೆಯಿಂದ ಸರತಿಯಲ್ಲಿ ನಿಂತು ಸಾರ್ವಜನಿಕರು ದರ್ಶನ ಪಡೆಯತ್ತಿದ್ದಾರೆ.

ರಾಜ್ಯದ ವಿವಿಧ ಮೂಲೆ ಮೂಲೆಗಳಿಂದ ಭಕ್ತರು ಬಂದಿದ್ದು, ವಿವಿಧ ಬಗೆಯ ಹೂಗಳಿಂದ ದೇವಸ್ಥಾನವ ಗರ್ಭಗುಡಿ ಅಲಂಕರಿಸಿದ್ದು, ಗುಲಾಬಿ, ತೆಂಗಿನಗರಿ, ಭತ್ತದ ತೆನೆ ಅಲಂಕಾರಗಳಿಂದ ಕಂಗೊಳಿಸುತ್ತಿದೆ. ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿಎ ಲಕ್ಷ್ಮಿಯ ಅಲಂಕಾರ ಮಾಡಲಾಗಿದೆ.

ನೂಕು ನುಗ್ಗುಲು ಉಂಟಾಗದ ರೀತಿಯಲ್ಲಿ ಬ್ಯಾರಿಕೆಡ್ ವ್ಯವಸ್ಥೆ ಮಾಡಿದ್ದು, ಅಹಿತಕರ ಘಟನೆ ಜರುಗದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. 2000,300 ಟಿಕೆಟ್ ಖರೀದಿ ಮಾಡಿ ಬರುವವರಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದೆ. ಧರ್ಮ ದರ್ಶನ ಹಾಗೂ ಮೆಟ್ಟಿಲುಗಳ ಮೂಲಕವು ಭಕ್ತರು ಆಗಮಿಸುತ್ತಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ಅವಕಾಶ ಇಲ್ಲ, ಲಲಿತಮಹಲ್ ಮೈದಾನದಿಂದ ಉಚಿತ ಸಾರಿಗೆ ಬಸ್ ವ್ಯವಸ್ಥೆ ಮಾಡಿದ್ದು, ಕುಡಿಯುವ ನೀರು, ಶೌಚಾಲಯ, ಮೂಲಭೂತ ಸೌಕರ್ಯಗಳ ವ್ಯವಸ್ಥೆ ಇದೆ.

Related Posts

Leave a Reply

Your email address will not be published. Required fields are marked *