ಬಾಲಕನೊಬ್ಬ ಗೆಳತಿಯನ್ನು ಕೊಲೆ ಮಾಡಿ ವೀಡಿಯೊವನ್ನು ಆನ್ಲೈನ್ನಲ್ಲಿ ಪೋಸ್ಟ್ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಾರ್ಖಂಡ್ನ ಸೆರೆಂಗ್ಡಾಗ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
17 ವರ್ಷದ ಬಾಲಕ ಜಯನಾಥ್ ಆತ್ಮಹತ್ಯೆ ಮಾಡಿಕೊಂಡವ. ಆತ 14 ವರ್ಷದ ಬಾಲಕಿಯ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಕತ್ತು ಸೀಳಿ ಕೊಂದಿದ್ದಾನೆ.
ಬಾಲಕ ಕೊಲೆ ಕೃತ್ಯವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಕಾಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಡೇಟಿಂಗ್ ಮಾಡುತ್ತಿದ್ದ ಈ ಅಪ್ರಾಪ್ತ ವಯಸ್ಕರು ದಂಡು ಗ್ರಾಮದಲ್ಲಿ ನಡೆದ ರಥಯಾತ್ರೆಯಲ್ಲಿ ಭಾಗವಹಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಥಯಾತ್ರೆಯಿಂದ ಸಂಜೆ ಹಿಂತಿರುಗುವಾಗ ಜಯನಾಥ್ ಬಾಲಕಿಯನ್ನು ಹಲವು ಬಾರಿ ಇರಿದು ಕೊಂದಿದ್ದಾನೆ.
ಹಲ್ಲೆಯ ಸಮಯದಲ್ಲಿ ಆಕೆಯನ್ನು ರಕ್ಷಿಸಲು ಹಲವರು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ, ಗ್ರಾಮಸ್ಥರು ಆತನನ್ನು ಹಿಡಿಯಲು ಪ್ರಯತ್ನಿಸಿದ್ದರು, ಆದರೆ ಅವನು ತಪ್ಪಿಸಿಕೊಂಡು ಓಡಿ ಹೋಗಿ ಬಳಿಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಎರಡೂ ಶವಗಳನ್ನುಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.