Menu

ನಿಷೇಧಿತ ಪಿಎಫ್ ಐ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ್ದ ಧರ್ಮಗುರು ಅರೆಸ್ಟ್

pfi

ನಿಷೇಧಿತ ಪಿಎಫ್‌ಐ ಸಂಘಟನೆ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ ಮುಸ್ಲಿಂ ಧರ್ಮಗುರುವನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧಿತ ಆರೋಪಿ.

ಭೂಗತರಾಗಿರುವ ಪಿಎಫ್‌ಐ ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್ ಸಲ್ಮಾನ್ ಸಲಾಂ ವಾಟ್ಸಾಪ್ ಗ್ರೂಪ್ ರಚಿಸಿ ಪಿಎಫ್‌ಐ ಸಂಘಟನೆಯ ಬಗ್ಗೆ ಸಂಘಟನೆಯ ಪುನರ್ ರಚನೆಯ ಬಗ್ಗೆ ಪ್ರಚಾರ ಮಾಡುತ್ತಿದ್ದ ಎಂದು ಹೇಳಲಾಗಿದೆ.

ಭೂಗತರಾಗಿರುವ ಪಿಎಫ್‌ಐ ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್, ಮತ್ತೆ ಚಟುವಟಿಕೆ ಆರಂಭಿಸಲು ಪ್ರಚೋದನೆ ನೀಡುತ್ತಿದ್ದನೆಂಬ ಆರೋಪ ಇದೆ.

ಮಂಗಳೂರಿನ ಉರ್ವಾಸ್ಟೋರ್ ಬಳಿಯಿಂದ ವಶಕ್ಕೆ ಪಡೆದ ಪೊಲೀಸರು, ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿ, ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಅ.24 ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

Related Posts

Leave a Reply

Your email address will not be published. Required fields are marked *