Menu

ಪ್ರೀತಿ ನಿರಾಕರಿಸಿದ ಶಿಕ್ಷಕಿಯನ್ನು ಇರಿದು ಕೊಲೆ

mysore crime

ಪ್ರೀತಿ ವಿಚಾರಕ್ಕೆ ಶಿಕ್ಷಕಿಗೆ ಚಾಕುವಿನಿಂದ ಇರಿದು ಯುವಕ ಹತ್ಯೆಗೈದ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ.

ಪಾಂಡವಪುರದ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ ಪೂರ್ಣಿಮಾ (36) ಹತ್ಯೆಯಾದ ಮಹಿಳೆ. ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಹತ್ಯೆ ಆರೋಪಿ.

ಶುಕ್ರವಾರ ಆರೋಪಿ, ಶಿಕ್ಷಕಿಗೆ ಚಾಕು ಇರಿದು ಪರಾರಿಯಾಗಿದ್ದ. ಚಾಕು ಇರಿತದಿಂದ ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ.

ಪ್ರೀತಿ ವಿಚಾರದಲ್ಲಿ ಕೋಪದಿಂದ ಯುವಕ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದೆ. ಆರೋಪಿ ಅಭಿಷೇಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

Related Posts

Leave a Reply

Your email address will not be published. Required fields are marked *