Menu

Accident death: ಶಿವಮೊಗ್ಗದಲ್ಲಿ ರಸ್ತೆ ಅಪಘಾತ: ಶಿಕ್ಷಕ ಸ್ಥಳದಲ್ಲೇ ಸಾವು

 

ಶಿವಮೊಗ್ಗದ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಶಿವಮಂದಿರ ಸಮೀಪ ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಸರ್ಕಾರಿ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರು ಸ್ಥಳದಲ್ಲಿಯೇ ಅಸು ನೀಗಿದ್ದಾರೆ.

ಅರಸಾಳು ಗ್ರಾಮದ ನಿವಾಸಿ ಮಂಜಯ್ಯ.ಟಿ (59) ಮೃತಪಟ್ಟವರು. ಅವರು ಕೋಟೆತಾರಿಗ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಶಾಲೆ ಮುಗಿಸಿ ರಿಪ್ಪನ್ ಪೇಟೆಯಿಂದ ಅರಸಾಳು ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇನ್ನೊಂದು ಬೈಕ್ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ರಿಪ್ಪನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *