ಬೆಳಗಾವಿ ನಗರದ ಅನಗೋಳದಲ್ಲಿ ಬಜಾರ್ನಲ್ಲಿ ಏಕಾಏಕಿ ಎದೆನೋವಿನಿಂದ ಕುಸಿದು ಬಿದ್ದು ಯೋಧ ಮೃತಪಟ್ಟಿದ್ದಾರೆ. ಯೋಧ ಏಕಾಏಕಿ ಕುಸಿದು ಬಿದ್ದು ಅಸು ನೀಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ರಜೆಯಲ್ಲಿ ಊರಿಗೆ ಬಂದಿದ್ದ ಇಬ್ರಾಹಿಂ ದೇವಲಾಪುರ (37) ಮೃತಪಟ್ಟ ಯೋಧ. ಕುಸಿದು ಬಿದ್ದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಸಾವು ಸಂಭವಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ಕೆಲವೇ ದಿನಗಳಲ್ಲಿ 8 ಜನರು ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ ಹಾಸನ, ಬೆಳಗಾವಿ, ಗುಲ್ಬರ್ಗ ಸೇರಿದಂತೆ ಹಲವೆಡೆ ಹೃದಯಾಘಾತದಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜೀವನಶೈಲಿ, ಅನಾರೋಗ್ಯಕರ ಆಹಾರ ಸೇವನೆ, ವ್ಯಾಯಾಮದ ಕೊರತೆಯೇ ಇದಕ್ಕೆ ಕಾರಣ ಎಂದು ಅಧ್ಯಯನ ವರದಿ ಹೇಳಿದೆ.