Menu

Accident deaths: ಬೆಂಗಳೂರು -ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಾರು ತಡೆಗೋಡೆಗೆ ಡಿಕ್ಕಿಯಾಗಿ ನಾಲ್ವರ ಸಾವು

ರಾಮನಗರ ತಾಲೂಕಿನ ಜಯಪುರ ಗೇಟ್ ಸಮೀಪ ಬೆಂಗಳೂರು– ಮೈಸೂರು ದಶಪಥ ಹೆದ್ದಾರಿಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿದ್ದಾರೆ.

ಕೆಆರ್ ಪೇಟೆ ಮೂಲದ ಮುತ್ತುರಾಜು (55), ತಮ್ಮನಗೌಡ (27), ಸಂಜು (28) ಹಾಗೂ ಚಾಲಕ‌ ಸಚಿನ್‌(27) ಮೃತಪಟ್ಟವರು. ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ಕಾರು ಚಾಲಕನ ನಿದ್ರೆಯ ಮಂಪರಿನಿಂದ ಹೆದ್ದಾರಿಯಲ್ಲಿನ ತಡೆಗೋಡೆಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *