Thursday, February 05, 2026
Menu

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿಚಾರಣೆ ನ.10ಕ್ಕೆ ಮುಂದೂಡಿಕೆ

ನಟ ದರ್ಶನ್, ನಟಿ ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿದೆ.

ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಫ್ರೇಮ್ ಕುರಿತು ವಿಚಾರಣೆ ನಡೆಸಬೇಕಿತ್ತು. ಆದರೆ ಜನದಟ್ಟಣೆ ಕಾರಣ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಲಾಗಿದೆ.

ವಾದ-ಪ್ರತಿವಾದ ಮಾಡುವ ವಕೀಲರು ಹೊರತುಪಡಿಸಿ ಉಳಿದವರು ಕೋರ್ಟ್ ನಿಂದ ಹೊರಗೆ ಹೋಗುವಂತೆ ನ್ಯಾಯಾಧೀಶರು ಸೂಚಿಸಿದರೂ ಜನದಟ್ಟಣೆ ಕಡಿಮೆ ಆಗಲಿಲ್ಲ.

ವಿಚಾರಣೆಯನ್ನು ಮುಚ್ಚಿದ ನ್ಯಾಯಾಧೀಶರ ಚೇಂಬರ್ ನಲ್ಲಿಯೇ ನಡೆಸುವಂತೆ ವಕೀಲರು ಮನವಿ ಮಾಡಿದರೂ ಸದ್ಯದ ಪರಿಸ್ಥಿತಿಯಲ್ಲಿ ಇದು ಅಸಾಧ್ಯ ಎಂಬ ಕಾರಣಕ್ಕೆ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಲು ನಿರ್ಧರಿಸಿದರು.

Related Posts

Leave a Reply

Your email address will not be published. Required fields are marked *