Menu

ಸಿರವಾರ ಮನೆಯಲ್ಲಿ ಊಟ ತಿಂದು ಮಲಗಿದವರಿಗೆ ಹೊಟ್ಟೆನೋವು: ಮೂವರ ಸಾವು

ರಾಯಚೂರು ಸಿರವಾರ ತಾಲೂಕಿನ ಕೆ.ತಿಮ್ಮಾಪುರದಲ್ಲಿ ಊಟ ಸೇವಿಸಿದ ಬಳಿಕ ಹೊಟ್ಟೆನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯುಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ರಮೇಶ್(35), ಪುತ್ರಿ ನಾಗಮ್ಮ(8), ದೀಪಾ(6) ಅಸು ನೀಗಿದ್ದು, ರಮೇಶ್‌ ಅವರ ಪತ್ನಿ ಪದ್ಮಾ ಅವರು ರಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತಿಬ್ಬರು ಮಕ್ಕಳಾದ ಕೃಷ್ಣ, ಚೈತ್ರಾಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತಿದೆ. ಕುಟುಂಬದವರೆಲ್ಲ ಸೋಮವಾರ ರಾತ್ರಿ ಚವಳಿಕಾಯಿ ಪಲ್ಯ, ರೊಟ್ಟಿ, ಅನ್ನ, ಸಾಂಬಾರ್ ಸೇವಿಸಿ ಮಲಗಿದ್ದು, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಹೊಟ್ಟೆ ನೋವಿನಿಂದ ನರಳಾಡುತ್ತಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಂಜಾನೆ 4 ಗಂಟೆ ಸುಮಾರಿಗೆ ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಘಟನೆ ಕೆ.ತಿಮ್ಮಾಪುರ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕವಿತಾಳ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *