ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಧಿಕಾರ ಕಳೆದುಕೊಳ್ಳಲಿದ್ದಾರೆ. ಭಾರತವನ್ನೇ ಬೆಚ್ಚಿ ಬೀಳಿಸುವ ಕಾರಣಗಳು ಮಮತಾ ಬ್ಯಾನರ್ಜಿ ಅಧಿಕಾರವನ್ನು ಮೊಟಕುಗೊಳಿಸಲಿದೆ ಎಂದು ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದಾರೆ. 2026ರ ಜನವರಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ ಎಂದು ಹೇಳಿದ್ದಾರೆ.
ಇನ್ನು 5 ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತದೆ, ಇದರೊಂದಿಗೆ ಮಮತಾ ಬ್ಯಾನರ್ಜಿ ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಸ್ಥಿರ ಸರ್ಕಾರ ನೀಡಿದ್ದಾರೆ. ಸತತವಾಗಿ ಅಧಿಕಾರದಲ್ಲಿದ್ದಾರೆ. ಈ ಬಾರಿಯೂ ಅಭೂತಪೂರ್ವ ಗೆಲುವಿನೊಂದಿಗೆ ಸರ್ಕಾರ ರಚಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಭಾರತ ವಿರೋಧಿ ಚಟುವಟಿಕೆ ಹೆಚ್ಚಾಗಿದೆ. ಬಾಂಗ್ಲಾದೇಶ ಸೇರಿದಂತೆ ಇತರ ದೇಶಗಳೊಂದಿಗೆ ಗಡಿ ಹಂಚಿಕೊಂಡಿರುವ ಪಶ್ಚಿಮ ಬಂಗಾಳದಲ್ಲಿ ಅಕ್ರಮವಾಗಿ ನುಸುಳುಕೋರರಿಗೆ ಆಧಾರ್ ಕಾರ್ಡ್, ಮತದಾರರ ಚೀಟಿ, ರೇಷನ್ ಕಾರ್ಡ್ ಮಾಡಿಕೊಡುವ ಹಲವು ಎಜೆನ್ಸಿಗಳು ಕಾರ್ಯನಿರ್ವಹಿಸುತ್ತಿದೆ. ಹಿಂದೂಗಳ ಮೇಲೆ ಸತತವಾಗಿ ದಾಳಿಯಾಗುತ್ತಿದೆ. ಹೀಗಾಗಿ ಈ ಪ್ರಮಖ ಕಾರಣಗಳಿಂದ ಮಮತಾ ಬ್ಯಾನರ್ಜಿ ಅಧಿಕಾರ ಕಳೆದುಕೊಂಡು ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿದೆ ಎಂದಿದ್ದಾರೆ.
ಮಮತಾ ಬ್ಯಾನರ್ಜಿ ಅಧಿಕಾರ ಮೊಟಕುಗೊಳಿಸಿ ರಾಷ್ಟ್ರಪತಿ ಆಳ್ವಿಕೆ ನಡೆಸಿದರೂ 6 ತಿಂಗಳ ಬಳಿಕ ಮತ್ತೆ ಇದೇ ಅವಕಾಶವನ್ನು ಅನುಕಂಪವಾಗಿ ಬಳಸಿಕೊಂಡು ಗೆದ್ದು ಬರುತ್ತಾರೆ ಎಂದು ಹಲವರು ಈ ಭವಿಷ್ಯವಾಣಿಗೆ ಪ್ರತಿಕ್ರಿಯಿಸಿದ್ದಾರೆ. ಮಮತಾ ಬ್ಯಾನರ್ಜಿ ಭಾರತೀಯ ರಾಜನೀತಿಯನ್ನು ಅರೆದು ಕುಡಿದಿದ್ದಾರೆ. ಯಾವುದೇ ಸಂದರ್ಭವನ್ನು ತನ್ನ ಪರವಾಗಿ ಒಲಿಸಿಕೊಳ್ಳವು ಶಕ್ತಿ ಹೊಂದಿದ್ದಾರೆ ಎಂದು ಹಲವರು ಹೇಳಿದ್ದಾರೆ.
ಕಮೆಂಟ್ ಮಾಡಿದ್ದಾರೆ. ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಕನಸು ಬೇಡ, ಮುಂದಿನ ಬಾರಿಯೂ ಮಮತಾ ಬ್ಯಾನರ್ಜಿಯೇ ಅಧಿಕಾರ ನಡೆಸಲಿದ್ದಾರೆ ಎಂದು ಮತ್ತೆ ಕೆಲವರು ಕಮೆಂಟ್ ಮಾಡಿದ್ದಾರೆ.