Menu

ಮಾಲೂರಿನಲ್ಲಿ ಬ್ರಿಡ್ಜ್‌ನಿಂದ ಉರುಳಿದ ಕಾರು: ಸ್ಥಳದಲ್ಲೇ ನಾಲ್ವರು ಯುವಕರ ಸಾವು

ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಬ್ರಿಡ್ಜ್‌ ಮೇಲಿನಿಂದ ಉರುಳಿ ನಾಲ್ವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಮೃತಪಟ್ಟ ಯುವಕರು ಚೆನ್ನೈನವರಾಗಿದ್ದು, ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಮತ್ತು ಜಯಶಂಕರ್ (30) ಎಂದು ಗುರುತಿಸಲಾಗಿದೆ. ಚಾಲಕನ ನಿದ್ರೆ ಮಂಪರಿನಿಂದ ನಿಯಂತ್ರಣ ತಪ್ಪಿದ ಕಾರು ಅಬ್ಬೇನಹಳ್ಳಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದೆ. ​ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತಕ್ಕೆ ನಿಖರ ಕಾರಣ ಎಣು ಎಂಬ ಬಗ್ಗೆ ತನಿಖೆ ತೀವ್ರಗೊಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *