Tuesday, November 25, 2025
Menu

ದಾವಣಗೆರೆ ಚಿನ್ನ ದರೋಡೆ: ಪಿಎಸ್‌ಐಗಳಿಬ್ಬರು ಸೇರಿ ನಾಲ್ವರ ಬಂಧನ

ದಾವಣಗೆರೆಯಲ್ಲಿ ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಟಿಜೆ ನಗರ ಠಾಣೆ ಪೊಲೀಸರು ಇಬ್ಬರು ಪಿಎಸ್‌ಐಗಳು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಬಂಧಿತ ಪಿಎಸ್‍ಐಗಳು ಎಂದು ಗುರುತಿಸಲಾಗಿದೆ.

ಇಬ್ಬರಿಗೆ ಸಹಕರಿಸಿದ್ದ ಚಿನ್ನದಂಗಡಿಯ ಕೆಲಸಗಾರರಾದ ಸತೀಶ್ ರೇವಣಕರ್, ನಾಗರಾಜ್ ರೇವಣಕರ್ ಎಂಬವರನ್ನು ಕೂಡ ಬಂಧಿಸಲಾಗಿದೆ. ಈ ಆರೋಪಿಗಳು ಪಿಎಸ್‍ಐಗಳಿಗೆ ವ್ಯಾಪಾರಿ ಬಳಿ ಚಿನ್ನ ಇರುವುದರ ಬಗ್ಗೆ ಮಾಹಿತಿ ನೀಡಿದ್ದರು.

ಆರೋಪಿ ಎಸ್‌ಐಗಳು ವರ್ಗಾವಣೆ ಆಗಿ ಐಜಿ ಅಫೀಸ್‌ನಲ್ಲಿ ರಿಪೋರ್ಟ್ ಮಾಡಿಕೊಂಡಿದ್ದರು. ಕಾರವಾರ ವ್ಯಾಪಾರಿ ವಿಶ್ವನಾಥ್ ಅರ್ಕಸಾಲಿ ಎಂಬವರು 80 ಗ್ರಾಂ ಬಂಗಾರದ ಒಡವೆಗಳನ್ನು ತೆಗೆದುಕೊಂಡು ದಾವಣಗೆರೆಯ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಸೇರಿ ವ್ಯಾಪಾರಿಗೆ ನಾವು ಐಜಿ ಸ್ಕ್ವಾಡ್ ಎಂದು ಹೇಳಿ ಹೆದರಿಸಿದ್ದರು. ಪೊಲೀಸ್ ಐಡಿ ಕಾರ್ಡ್, ನಕಲಿ ಗನ್ ತೋರಿಸಿ ಕೆಟಿಜೆ ನಗರ ಪೊಲೀಸ್ ಠಾಣೆಗೆ ಕಾರಿನಲ್ಲಿ ಕರೆದೊಯ್ದು ಒಳಗೆ ಹೋಗದೆ ವಾಪಸ್ ಕರೆತಂದಿದ್ದರು. ವ್ಯಾಪಾರಿಯ ಬಳಿ ಇದ್ದ ಚಿನ್ನ ಕಸಿದುಕೊಂಡು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದರು.

ಚಿನ್ನ ಕಳೆದುಕೊಂಡ ವ್ಯಾಪಾರಿ ಕೆಟೆಜೆ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೊಂಡ ಕೆಟಿಜೆ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ.

Related Posts

Leave a Reply

Your email address will not be published. Required fields are marked *