Menu

ಧಾರಾಕಾರ ಮಳೆಗೆ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಬಂದ್‌, ಶಿರಾಡಿಘಾಟ್‌ ರಸ್ತೆ ಕ್ಲೋಸ್‌

ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಕಲೇಶಪುರ ತಾಲೂಕಿನ ಎಡಕುಮೇರು ಬಳಿ ರೈಲು ಹಳಿ ಮೇಲೆ ಮಣ್ಣು ಕುಸಿದು ಬೆಂಗಳೂರು-ಮಂಗಳೂರು ರೈಲು ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದೆ.

ಸುರಿಯುತ್ತಿರುವ ಮಳೆ ಮಧ್ಯೆಯೇ ರಕ್ಷಣಾ ಸಿಬ್ಬಂದಿ ರಾತ್ರಿಯಿಡೀ ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರೂ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಇನ್ನೂ ಅಬ್ಬರಿಸುತ್ತಿದ್ದು, ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ.

ಸಕಲೇಶಪುರದ ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತವಾಗಿದೆ. ಮರ, ಗಿಡಗಳ ಸಮೇತ ರಸ್ತೆಗೆ ಮಣ್ಣು ಕುಸಿಯುತ್ತಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಶಿರಾಡಿಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ.

ಮಾರನಹಳ್ಳಿ ಸಮೀಪ ಕಾರಿನ ಮೇಲೆ ದೊಡ್ಡ ಮರವೊಂದು ಬಿದ್ದಿದೆ. ಕಾರಿನಲ್ಲಿದ್ದವರನ್ನು ಪೊಲೀಸರು ರಕ್ಷಣೆ ಮಾಡಿ ಬೇರೆ ವಾಹನದಲ್ಲಿ ಕಳುಹಿಸಿ ಕೊಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಯಲ್ಲಿ ಪೊಲೀಸರು ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಿದ್ದಾರೆ. ಮಾರನಹಳ್ಳಿ ಬಳಿ ರಸ್ತೆಗೆ ಬ್ಯಾರಿಕೇಡ್ ಹಾಕಲಾಗಿದೆ.

Related Posts

Leave a Reply

Your email address will not be published. Required fields are marked *