Menu

ಕ್ಯಾಂಟರ್ ಬೈಕ್ ಡಿಕ್ಕಿ‌ ಫಾರೆಸ್ಟ್ ಗಾರ್ಡ್ ಸೇರಿ ಇಬ್ಬರು ಸಾವು

accident

ಬೆಂಗಳೂರು: ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದು ಬೈಕ್ ನಲ್ಲಿ ಹೋಗುತ್ತಿದ್ದ ಫಾರೆಸ್ಟ್ ಗಾರ್ಡ್ ಸೇರಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ‌ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಭಾನುವಾರ ನಡೆದಿದೆ.

ಬೈಕ್​​ನಲ್ಲಿದ್ದ ಫಾರೆಸ್ಟ್ ಗಾರ್ಡ್ ಕೆಂಪರಾಜು(50) ಹಾಗೂ ರಾಜಣ್ಣ(51) ಮೃತಪಟ್ಟವರು.

ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ರಾಜಣ್ಣ ಅವರನ್ನು ಟಿವಿಎಸ್ ವಿಕ್ಟರ್ ಬೈಕ್ ನಲ್ಲಿ ಕೂರಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿಯ ನಮಸ್ತೆ ಬೆಂಗಳೂರು ಹೋಟೆಲ್ ಸಮೀಪ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಗಾರ್ಡ್ ಕೆಂಪರಾಜ್ ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದು ತಲೆಗೆ ಇಬ್ಬರಿಗೂ ತೀವ್ರತರವಾದ ಗಾಯ ಸಂಭವಿಸಿ ಮೃತಪಟ್ಟಿರುತ್ತಾರೆ.

ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ವಿಕೆಂಡ್ ಹಿನ್ನೆಲೆ ಊರಿಗೆ ಹೋಗಿದ್ದ ಜನರು ಇಂದು ಬೆಂಗಳೂರಿಗೆ ವಾಪಸ್ ಬರುತ್ತಾರೆ. ಈ ಸಮಯದಲ್ಲಿ ನೆಲಮಂಗಲದ ಬಳಿ ವಾಹನಗಳ ದಟ್ಟಣೆ ಇರುವುದು ಇದರ ಜೊತೆಯಲ್ಲಿ ರಸ್ತೆ ಅಗಲೀಕರಣದ ಕಾಮಾಗಾರಿ ನಡೆಯುತ್ತಿರುವುದು ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದರು

ಈ ಪ್ರದೇಶದಲ್ಲಿ ಅಪಘಾತ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕುರಿತು ಪರಿಶೀಲನೆ ಮಾಡಲಾಗುತ್ತಿದೆ, ರಸ್ತೆ ಅಗಲೀಕರಣ ಕಾಮಗಾರಿ ಮುಕ್ತಾಯವಾದರೆ. ವಾಹನ ಸುಗಮ ಸಂಚಾರಕ್ಕೆ ಅವಕಾಶ ಸಿಗುವುದು, ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಗಳ ನಿಯೋಜನೆಗೂ ಕ್ರಮ ತೆಗೆದುಕೊಳ್ಳುವುದ್ದಾಗಿ ಹೇಳಿದರು.

ಬಸ್ ಡಿಕ್ಕಿ ಸಾವು:

ರಾಷ್ಟ್ರೀಯ ಹೆದ್ದಾರಿ 48ರ ಬೇಗೂರು ಬಳಿ ಸೋಮವಾರ ಬೆಳಿಗ್ಗೆ ಖಾಸಗಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದು ರೈತ ಲಕ್ಷ್ಮಿಕಾಂತಪ್ಪ (60) ಅವರು ಮೃತಪಟ್ಟಿದ್ದಾರೆ.

ಲಕ್ಷ್ಮಿಕಾಂತಪ್ಪ ರವರು ಬೇಗೂರು ಸಮೀಪ ಬೆಳಿಗ್ಗೆ ಎಂಟು ಗಂಟೆ ಸುಮಾರಿಗೆ ತೋಟದ ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್ ನಲ್ಲಿ ವಾಪಸಾಗುವಾಗ ಖಾಸಗಿ ಕಂಪನಿಯ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಸಂಚಾರ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *