Menu

ನಮ್ಮ ಜಾಗದಲ್ಲಿ ಸರ್ಕಾರದಿಂದ ಮಾಲ್‌ ನಿರ್ಮಾಣ ಸರಿಯಲ್ಲ ಎಂದ ಪ್ರಮೋದಾ ದೇವಿ ಒಡೆಯರ್‌

ಮೈಸೂರಿನಲ್ಲಿ ಸರ್ಕಾರ ಯೂನಿಟಿ ಮಾಲ್ ನಿರ್ಮಾಣ ಮಾಡುವುದಕ್ಕೆ ನನ್ನ ವಿರೋಧ ಇಲ್ಲ, ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ನ್ಯಾಯಾಲಯದಲ್ಲಿ ಇದೇ ವಿಚಾರವಾಗಿ ಪ್ರಕರಣ ದಾಖಲಾಗಿದೆ ಎಂದು ಪ್ರಮೋದಾ ದೇವಿ ಒಡೆಯರ್‌ ಹೇಳಿದ್ದಾರೆ.

ಮೈಸೂರು ಕಸಬಾ ಹೋಬಳಿಯ ಸ. ನಂ.1 ರಲ್ಲಿರುವ ದೊಡ್ಡಕೆರೆ ಟ್ಯಾಂಕ್ ಬೆಡ್ ಭೂಮಿಯಲ್ಲಿ ನಿರ್ಮಿಸಲು ಉದ್ದೇಶಿಸಲಾದ ಯೂನಿಟಿ ಮಾಲ್‌ ವಿಚಾರಕ್ಕೆ ಕರ್ನಾಟಕದ ಹೈಕೋರ್ಟ್‌ ಯಥಾಸ್ಥಿತಿ ಆದೇಶದ ನೀಡಿದೆ. ಈ ವಿಚಾರವಾಗಿ ಕೆಲವು ಪತ್ರಿಕೆ, ಟಿವಿಗಳಲ್ಲಿ ತಪ್ಪು ವರದಿ ಪ್ರಕಟವಾಗಿದೆ. ರಾಜ್ಯದ ಕರಕುಶಲ ವಸ್ತುಗಳು ಮತ್ತು ಜಿಐ ಟ್ಯಾಗ್ ಮಾಡಲಾದ ಉತ್ಪನ್ನಗಳನ್ನು ಪ್ರದರ್ಶಿಸುವುದನ್ನು ನಾನು ವಿರೋಧಿಸುವುದಿಲ್ಲ ಎಂದರು.

ಬಹಿರಂಗ ಮತ್ತು ಅಂತರಂಗ ಜಗಳ ಇಲ್ಲಿ ಇಲ್ಲ, ಕರ್ನಾಟಕ ಸರ್ಕಾರವು ಮಾಲ್ ಸ್ಥಾಪಿಸಲಿ, ಅದಕ್ಕೆ ನನ್ನ ವಿರೋಧ ಇಲ್ಲ ಸರ್ಕಾರಕ್ಕೆ ಸೇರಿದ ಯಾವುದೇ ಭೂಮಿಯನ್ನು ಅದಕ್ಕಾಗಿ ಹಂಚಿಕೆ ಮಾಡಲಿ. ಅದರ ಬದಲು ಈ ನಿರ್ದಿಷ್ಟ ಖಾಸಗಿ ಆಸ್ತಿಯನ್ನು ಹಂಚಿಕೆ ಮಾಡುವುದು ಸರಿಯಲ್ಲ. ನನ್ನ ಪೂರ್ವಜರ ಭೂಮಿಯನ್ನು ಉಳಿಸಿಕೊಳ್ಳುವುದು ಮತ್ತು ರಕ್ಷಿಸುವುದು ನನ್ನ ಜವಾಬ್ದಾರಿ, ಅದೇ ಕೆಲಸವನ್ನು ನಾನು ಮಾಡಿದ್ದೇನೆ. ನಾನು ಸಲ್ಲಿಸಿದ ಅರ್ಜಿಯಲ್ಲಿ ನನ್ನ ನಿಲುವನ್ನು ದೃಢೀಕರಿಸಲು ಸಂಬಂಧಿತ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸರ್ಕಾರದ ಪ್ರತಿಕ್ರಿಯೆ ಮುಂದಿನ ವಿಚಾರಣೆಗಾಗಿ ಕರ್ನಾಟಕದ ಹೈಕೋರ್ಟ್ ಮುಂದೆ ಬರಲಿದೆ ಎಂದು ಪ್ರಮೋದಾದೇವಿ ಒಡೆಯರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *