Thursday, December 25, 2025
Menu

ರಾಜ್ಯದ ಬ್ಯಾಂಕ್‌ಗಳಲ್ಲಿ ಕ್ಲೇಮ್‌ ಆಗದೆ ಉಳಿದಿರುವ ಹಣ 3,400 ಕೋಟಿ ರೂ.

RBI

ಕರ್ನಾಟಕದ ಬ್ಯಾಂಕ್‌ಗಳಲ್ಲಿ ಹತ್ತಕ್ಕೂ ಹೆಚ್ಚು ವರ್ಷಗಳಿಂದ 3,400 ಕೋಟಿ ರೂ. ಕ್ಲೇಮ್ ಆಗದೆ ಉಳಿದಿದೆ ಎಂದು ಆರ್​ಬಿಐ ಬೆಂಗಳೂರು ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.

ಮಂಗಳೂರಿನಲ್ಲಿ ನಡೆದ ಜಿಲ್ಲಾ ಸಮಾಲೋಚನ ಸಮಿತಿ (ಡಿಸಿಸಿ) ಮತ್ತು ಜಿಲ್ಲಾ ಮಟ್ಟದ ಪರಾಮರ್ಶೆ ಸಮಿತಿ (ಡಿಎಲ್​ಆರ್​ಸಿ) ಸಭೆಯಲ್ಲಿ ಈ ವಿಷಯ ಪ್ರಕಟಿಸಿದ್ದಾರೆ.

ಹತ್ತಕ್ಕೂ ಹೆಚ್ಚು ವರ್ಷಗಳಿಂದ ಬ್ಯಾಂಕ್ ಖಾತೆಗಳು, ಡೆಪಾಸಿಟ್ ಪ್ಲಾನ್​ಗಳು ನಿಷ್ಕ್ರಿಯವಾಗಿದ್ದರೆ ಆರ್​ಬಿಐನ ಠೇವಣಿದಾರ ಶಿಕ್ಷಣ ಮತ್ತು ಜಾಗೃತಿ ನಿಧಿ ವಿಶೇಷ ನಿಧಿಗೆ ವರ್ಗಾವಣೆ ಮಾಡಲಾಗು ತ್ತದೆ. ರಾಷ್ಟ್ರಾದ್ಯಂತ ಬ್ಯಾಂಕುಗಳ ನಿಷ್ಕ್ರಿಯ ಅಕೌಂಟ್​ಗಳಿಂದ ಆರ್​ಬಿಐನ ಡಿಇಎಎಫ್ ಫಂಡ್​ಗೆ ಒಟ್ಟು 75,000 ಕೋಟಿ ರೂ. ವರ್ಗಾವಣೆಯಾಗಿದೆ ಎಂದು ತಿಳಿಸಿದ್ದಾರೆ. ಕ್ಲೇಮ್ ಆಗದ ಶೇ. 80ರಷ್ಟು ಅಕೌಂಟ್​ಗಳಲ್ಲಿ ಇರುವ ಹಣ 10,000 ರೂ.ಗಿಂತ ಕಡಿಮೆ. ಮೊಬೈಲ್ ನಂಬರ್ ಅಪ್​ಡೇಟ್ ಆಗದೇ ಇರುವುದು, ಕೆವೈಸಿ ಅಪ್​ಡೇಟ್ ಆಗದಿರುವುದು, ಖಾತೆದಾರರು ಜೀವಂತ ಇಲ್ಲದಿ ರುವುದು ಇತ್ಯಾದಿ ಕಾರಣಕ್ಕೆ ಅಕೌಂಟ್​ಗಳು ನಿಷ್ಕ್ರಿಯ ಆಗಿವೆ.

ಬ್ಯಾಂಕ್‌ಗಳಲ್ಲಿ ಕ್ಲೇಮ್ ಆಗದೆ ಉಳಿದಿರುವ ಹಣವನ್ನು ಖಾತೆದಾರರಿಗೆ ಅಥವಾ ವಾರಸುದಾರರಿಗೆ ತಲುಪಿಸಲು ಆರ್​ಬಿಐ ಅಭಿಯಾನವನ್ನೇ ನಡೆಸಿದೆ. ‘ನಿಮ್ಮ ಹಣ ನಿಮ್ಮ ಹಕ್ಕು’ ಕೆಂಪೇನ್ ಡಿಸೆಂಬರ್ 31ರವರೆಗೂ ಇರಲಿದೆ. ಈ ಖಾತೆದಾರರನ್ನು ಗುರುತಿಸಿ ಜೀವಂತ ಇದ್ದರೆ ಖಾತೆ ಸಕ್ರಿಯಗೊಳಿಸುವ ಅಥವಾ ಹಣ ಮರಳಿಸುವ ಕೆಲಸ ಮಾಡಲಾಗುತ್ತಿದೆ. ಜೀವಂತ ಇಲ್ಲದಿದ್ದರೆ ವಾರಸುದಾರರಿಗೆ ಹಣ ಮರಳಿಸುವ ಪ್ರಯತ್ನ ಮಾಡಲಾಗುತ್ತದೆ ಎಂದರು.

ಅನ್​ಕ್ಲೇಮ್ಡ್ ಡೆಪಾಸಿಟ್​ಗಳು ಯಾವುವು ಎಂದು ವೀಕ್ಷಿಸಲು udgam.rbi.org.in/ ಪೋರ್ಟಲ್‌ ಇದೆ. ಖಾತೆದಾರ ಹೆಸರು, ಬ್ಯಾಂಕನ್ನು ಆಯ್ಕೆ ಮಾಡಿಕೊಂಡು, ಪ್ಯಾನ್ ಅಥವಾ ವೋಟರ್ ಐಡಿ, ಡಿಎಲ್, ಪಾಸ್ಪೋರ್ಟ್ ನಂಬರ್​ನಿಂದ ಸರ್ಚ್ ಮಾಡಿ ಅನ್​ಕ್ಲೇಮ್ಡ್ ಡೆಪಾಸಿಟ್ ಇದ್ದರೆ ಪತ್ತೆ ಮಾಡಬಹುದು. ಕ್ಲೇಮ್ ಆಗದೆ ಖಾತೆ ಇರುವುದು ಗೊತ್ತಾದರೆ ಖುದ್ದಾಗಿ ಆ ಬ್ಯಾಂಕ್ ಕಚೇರಿಗೆ ಹೋಗಿ ಕೆವೈಸಿ ದಾಖಲೆಗಳನ್ನು ಸಲ್ಲಿಸಿದರೆ ಹಣ ಪಡೆಯಬಹುದು.

Related Posts

Leave a Reply

Your email address will not be published. Required fields are marked *