Thursday, January 15, 2026
Menu

ಅಕ್ಕಿ ತುಂಬಿದ ಲಾರಿ ಪಲ್ಟಿ: ಇಬ್ಬರು ಸಾವು

mandya rice

ಮಂಡ್ಯ:ಮಳವಳ್ಳಿ ತಾಲೂಕಿನ ಕಿರುಗಾವಲು ಸಮೀಪ ಅಕ್ಕಿ ತುಂಬಿದ ಲಾರಿ ಒಂದು ಪಲ್ಟಿ ಹೊಡೆದು ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಕಿರುಗಾವಲಿನ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಬನ್ನೂರಿಗೆ ತೆರಳುತ್ತಿದ್ದ ಮಿನಿ ಲಾರಿ ಕೊದೆನು ಕೊಪ್ಪಲು ನಡು ಮಾರ್ಗದಲ್ಲಿ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಕೂಲಿಕಾರರು ಸಾವನ್ನಪ್ಪಿದ್ದಾರೆ.

ಬನ್ನೂರಿನ ವಾಸಿಂ (25) ಹಾಗೂ ಸನಿಯಾ (24) ಮೃತಪಟ್ಟ ಕೂಲಿಕಾರರಾಗಿದ್ದಾರೆ. ಕಿರುಗಾವಲು ಬಾಸ್ ರೈಸ್ ಮಿಲ್ ನಿಂದ ಅಕ್ಕಿ ತುಂಬಿಕೊಂಡು ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

ಲಾರಿ ತುಂಬಿಕೊಂಡು ಹೋಗುತ್ತಿದ್ದ ಪಡಿತರ ಚೀಟಿಯ ಅಕ್ಕಿಯೋ ಅಥವಾ ರೈತರಿಂದ ಖರೀದಿಸಿದ ಭತ್ತದ ಅಕ್ಕಿಯೋ ಎಂಬುದು ಎಂಬುದು ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ. ಈ ಸಂಬಂಧ ಕಿರುಗಾವಲು ಸಬ್ ಇನ್ಸ್‌ಪೆಕ್ಟರ್ ರವಿಕುಮಾರ್ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ

Related Posts

Leave a Reply

Your email address will not be published. Required fields are marked *