ತಮಿಳುನಾಡು ಅಸೆಂಬ್ಲಿಯಲ್ಲಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡದೆ ರಾಜ್ಯಪಾಲರು ಹೊರ ನಡೆದಿದ್ದಾರೆ. ಈ ಭಾಷಣದಲ್ಲಿ ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವ ಹೇಳಿಕೆಗಳಿವೆ. ಜನರಿಗೆ ತೊಂದರೆ ನೀಡುವ ನಿರ್ಣಾಯಕ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗಿದೆ. ತಮಿಳುನಾಡು 12 ಲಕ್ಷ ಕೋಟಿ ರೂ. ಗೂ ಹೆಚ್ಚು ಹೂಡಿಕೆ ಆಕರ್ಷಿಸಿದೆ ಎಂದು ಹೇಳುವುದು ಸತ್ಯಕ್ಕೆ ದೂರವಾಗಿದೆ ಎಂದು ಲೋಕಭವನ ಆರೋಪಿಸಿದೆ.
ಈ ವರ್ಷದ ತಮಿಳುನಾಡು ಪ್ರಥಮ ಅಧಿವೇಶನದಲ್ಲಿ ಡಿಎಂಕೆ ಸರ್ಕಾರ ಸಿದ್ಧಪಡಿಸಿದ ಭಾಷಣ ಓದಲು ರಾಜ್ಯಪಾಲ ಆರ್ಎನ್ ರವಿ ನಿರಾಕರಿಸಿದ್ದಾರೆ. ರಾಜ್ಯಪಾಲರ ಮೈಕ್ ಸ್ವಿಚ್ ಆಫ್ ಆಗಿತ್ತು ಎಂದು ಲೋಕ ಭವನ ಹೇಳಿದೆ. 234 ಸದಸ್ಯ ಬಲದ ಸದನದಲ್ಲಿ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡದೆ ರಾಜ್ಯಪಾಲರು ಹೊರ ನಡೆದಿರುವುದಕ್ಕೆ ಲೋಕ ಭವನ ವಿವರಣೆ ನೀಡಿದೆ.
ರಾಜ್ಯಪಾಲರ ಮೈಕ್ ಪದೇ ಪದೆ ಸ್ವಿಚ್ ಆಫ್ ಮಾಡಿ ಮಾತನಾಡಲು ಅವರಿಗೆ ಅವಕಾಶ ನೀಡಲಿಲ್ಲ ಎಂದು ಆರೋಪಿಸಲಾಗಿದೆ. ಭಾಷಣದಲ್ಲಿ ಆಧಾರರಹಿತ ಮತ್ತು ತಪ್ಪುದಾರಿಗೆಳೆಯುವ ಹೇಳಿಕೆಗಳಿವೆ. ನಿರೀಕ್ಷಿತ ಹೂಡಿಕೆದಾರರೊಂದಿಗಿನ ಅನೇಕ ಒಪ್ಪಂದಗಳು ಕಾಗದದ ಮೇಲೆ ಮಾತ್ರ ಉಳಿದಿವೆ. ಅದರಲ್ಲಿ ಒಂದು ಭಾಗದಷ್ಟು ಹೂಡಿಕೆಯಾಗಿಲ್ಲ. ತಮಿಳುನಾಡು ಕಡಿಮೆ ಹೂಡಿಕೆದಾರರನ್ನು ಆಕರ್ಷಿಸುತ್ತಿರುವುದನ್ನು ಅಂಕಿಅಂಶಗಳು ತೋರಿಸುತ್ತವೆ ಎಂದು ಲೋಕ ಭವನ ಹೇಳಿದೆ.
ನಾಲ್ಕು ವರ್ಷಗಳ ಹಿಂದೆ ತಮಿಳುನಾಡು, ವಿದೇಶಿ ನೇರ ಬಂಡವಾಳವನ್ನು ಸ್ವೀಕರಿಸುವ ರಾಜ್ಯಗಳಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು. ಇಂದು ಆರನೇ ಸ್ಥಾನದಲ್ಲಿ ಉಳಿಯುವುದು ಕಷ್ಟವಿದೆ. ರಾಷ್ಟ್ರಗೀತೆಯನ್ನು ಮತ್ತೊಮ್ಮೆ ಅವಮಾನಿಸಲಾಗಿದ್ದು, ಮೂಲ ಭೂತ ಸಾಂವಿಧಾನಿಕ ಕರ್ತವ್ಯ ಕಡೆಗಣಿಸಲಾಗಿದೆ. ದಲಿತರ ಮೇಲಿನ ದೌರ್ಜನ್ಯಗಳು ಮತ್ತು ದಲಿತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಿವೆ. ಈ ಭಾಷಣದಲ್ಲಿ ಅವುಗಳ ಮೇಲೆ ಯಾವುದೇ ಕ್ರಮದ ಉಲ್ಲೇಖವಿಲ್ಲ ಎಂದು ಲೋಕ ಭವನ ಪ್ರಕಟಣೆಯಲ್ಲಿ ಆರೋಪಿಸಿದೆ.


