Menu

ಬ್ಯಾಂಕ್‌ನಲ್ಲಿ ನಕಲಿ ಚಿನ್ನ ಅಡವಿಟ್ಟು 56.78 ಲಕ್ಷ ರೂ. ವಂಚನೆ

ಮೈಸೂರಿನ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಮರ್ಕೆಂಟೈಲ್ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 56.78 ಲಕ್ಷ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬಯಲಾಗಿದೆ.

ಬ್ಯಾಂಕ್ ಸಿಬ್ಬಂದಿ ಸುರೇಶ್ ಕಣ್ಣನ್ ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಏಳು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮೈಸೂರಿನ ಅಬ್ದುಲ್ ಜಲೀಲ್, ಮಂಡ್ಯದ ಸಾಗರ್, ಪುಟ್ಟರಾಜು, ರವಿಕುಮಾರ್, ಆತನ ಪತ್ನಿ ದಿವ್ಯ, ಬೆಂಗಳೂರಿನ ನಾಗರತ್ನ ರೆಡ್ಡಿ ಹಾಗೂ ಟಿ.ನರಸೀಪುರದ ರವೀಂದ್ರ ಕುಮಾರ್ ಆರೋಪಿಗಳು.

ರವೀಂದ್ರ ಕುಮಾರ್ ಬ್ಯಾಂಕ್‌ನ ಚಿನ್ನಾಭರಣ ಮೌಲ್ಯಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ವಂಚಕರೊಂದಿಗೆ ಶಾಮೀಲಾಗಿ ನಕಲಿ ಚಿನ್ನಾಭರಣಗಳನ್ನು ಮೌಲ್ಯಮಾಪನ ಮಾಡಿದ್ದಾರೆ ಎನ್ನಲಾಗಿದೆ. ಆರೋಪಿಗಳು ನಾನಾ ಹೆಸರುಗಳಲ್ಲಿ ಒಟ್ಟು 782 ಗ್ರಾಂ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಸಾಲ ಪಡೆದಿದ್ದರು. 2026ರ ಜನವರಿ 26ರಂದು ಮರುಮೌಲ್ಯಮಾಪನ ವೇಳೆ ವಂಚನೆ ಪತ್ತೆಯಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *