Menu

ಬೆಂಗಳೂರಿನ ರಸ್ತೆಯಲ್ಲಿ ಹಗಲಲ್ಲೇ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬೆಂಗಳೂರಿನ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ದಾಸರಹಳ್ಳಿಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಾಡುಹಗಲೇ ನಡು ರಸ್ತೆಯಲ್ಲಿ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ನಡೆದಿದೆ.

ಸಂತೋಷ್​​ ಎಂಬಾತನ ಮೇಲೆ 68 ಬಾರಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ದಾಳಿ ನಡೆದಿದೆ. ಶರತ್​​ ಮತ್ತು ಗ್ಯಾಂಗ್​​ ಈ ದಾಳಿ ನಡೆಸಿದ ಬಳಿಕ ಡ್ಯಾನ್ಸ್​​ ಮಾಡಿ ವಿಕೃತಿ ತೋರಿದ್ದಾರೆ.

ಕಾರು ಓಡಿಸುವ ವಿಚಾರಕ್ಕೆ ಸ್ನೇಹಿತ ಮೋಹನ್​​ ಎಂಬಾತನ ಜೊತೆಗೆ ಸಂತೋಷ್​​ ಬೆಂಗಳೂರಿನಲ್ಲಿ ಗಲಾಟೆ ಮಾಡಿಕೊಂಡಿದ್ದ. ಬಳಿಕ ಮಂಡ್ಯದಲ್ಲಿ ಕುಡಿದು ಕೊಳ್ಳೇಗಾಲಕ್ಕೆ ಹೋಗಿದ್ದಾಗ ಮೋಹನ್​​ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದ. 2024ರಲ್ಲಿ ಈ ಘಟನೆ ನಡೆದಿದ್ದು, ಮೋಹನನ್ನು ಕಾರಿನಲ್ಲಿ ಕೂರಿಸಿ ಸಂತೋಷ್​​ ಪರಾರಿಯಾಗಿದ್ದ.

ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಆರೋಪಿ ಸಂತೋಷನನ್ನು ಬಂಧಿಸಿದ್ದರು. ಜೈಲು ಸೇರಿದ್ದ ಸಂತೋಷ್ 4 ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರ ಬಂದಿದ್ದ. ಈತನಿಂದ ಕೊಲೆಯಾಗಿದ್ದ ಮೋಹನ್​​ನ​​ ಸಹೋದರ ಶರತ್ ತಂಡಕಟ್ಟಿಕೊಂಡು ಬಂದು ಸಂತೋಷ್​​ ಮೇಲೆ ದಾಳಿ ಮಾಡಿದ್ದಾನೆ ಎನ್ನಲಾಗಿದೆ.

ಹಳೆ ದ್ವೇಷದ ಹಿನ್ನಲೆ ಶರತ್ ಆ್ಯಂಡ್​​ ಗ್ಯಾಂಗ್ ಸಂತೋಷ್​​ ಮೇಲೆ ಭಯಾನಕ ದಾಳಿ ನಡೆಸಿದೆ, . ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಂತೋಷ್‌ ಸಂತೋಷ್​​ ಬದುಕಿರುವುದೇ ಪವಾಡ ಎಂಬಂತಿದೆ.

Related Posts

Leave a Reply

Your email address will not be published. Required fields are marked *