ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡುವುದಾಗಿ ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈವರೆಗೆ ಸಾರ್ವಜನಿಕರು ಅವರ ಸದಾಶಿವ ನಗರದ ಮನೆ ಬಳಿ ಹೋಗಿ ಅಹವಾಲು ಸಲ್ಲಿಸುತ್ತಿದ್ದರು, ಆದರೆ ಇನ್ನು ಮುಂದೆ ಅದಕ್ಕೆ ಅವಕಾಶವಿಲ್ಲ, ಸಾರ್ವಜನಿಕರು ಗೃಹ ಕಚೇರಿ ಕೃಷ್ಣಾದಲ್ಲಿ ಸಲ್ಲಿಸಬಹುದಾಗಿದೆ.


