Menu

ಜಮ್ಮು-ಕಾಶ್ಮೀರ ಅಸ್ತಿತ್ವಕ್ಕಾಗಿ ಫಾರೂಕ್ ಮತ್ತು ಒಮರ್ ಅಬ್ದುಲ್ಲಾ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮೆರವಣಿಗೆಯ ಸಂದರ್ಭದಲ್ಲಿ ಉಂಟಾದ ಗೊಂದಲ ಮತ್ತು ಅಶ್ರುವಾಯು ದಾಳಿಯ ನಡುವೆಯೇ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಲವಾರು ಶಾಸಕರು ಮತ್ತು ಸಚಿವರೊಂದಿಗೆ ದೆಹಲಿಯ ಜಂತರ್ ಮಂತರ್‌ಗೆ ತಲುಪಿ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ರಾಜ್ಯತ್ವವನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸಿ ಹಾಲಿ ಮುಖ್ಯಮಂತ್ರಿಯೊಬ್ಬರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದು ಇದೇ ಮೊದಲ ಬಾರಿಯಾಗಿದೆ. ಒಮರ್ ಅಬ್ದುಲ್ಲಾ ಅವರ ತಂದೆ ಮತ್ತು ಮಾಜಿ ಮುಖ್ಯಮಂತ್ರಿ
ಫಾರೂಕ್ ಅಬ್ದುಲ್ಲಾ ಕೂಡ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 89 ವರ್ಷದ ಫಾರೂಕ್ ಅಬ್ದುಲ್ಲಾ ಅವರು ತಮ್ಮ ವಾಕಿಂಗ್ ಸ್ಟಿಕ್ ಹಿಡಿದುಕೊಂಡು ಮೆರವಣಿಗೆಯ ಉದ್ದಕ್ಕೂ ಪ್ರತಿಭಟನಾಕಾರರೊಂದಿಗೆ ಹೆಜ್ಜೆ ಹಾಕಿದರು.

ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದ ರಾಜಕೀಯ ವಿರೋಧಿಗಳ ವಿರುದ್ಧ ವಾಗ್ದಾಳಿ ನಡೆಸಿದ ಒಮರ್ ಅಬ್ದುಲ್ಲಾ, ತಮ್ಮ ತಂದೆಯವರು ವಯಸ್ಸಾಗಿದ್ದರೂ ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿದ್ದು, ಇತರರು ತಮ್ಮ ಹಿತಾಸಕ್ತಿಗಳಿಗೆ ಹೋರಾಟದಲ್ಲಿ ಭಾಗವಹಿಸದಿರುವುದು ದುರದೃಷ್ಟಕರ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಹಕ್ಕುಗಳು ಮತ್ತು ಘನತೆಗಾಗಿ 90 ವರ್ಷದ ವೃದ್ಧರೊಬ್ಬರು ಮುಂಚೂಣಿಯಲ್ಲಿ ನಿಂತು ಹೋರಾಡುತ್ತಿದ್ದರೆ, ಇನ್ನು ಕೆಲವರು ಮನೆಯಲ್ಲಿ ಕುಳಿತು ಟ್ವೀಟ್ ಮಾಡುತ್ತಿದ್ದಾರೆ ಎಂದು ಅಬ್ದುಲ್ಲಾ
ವ್ಯಂಗ್ಯವಾಡಿದರು.

2019ರ ಆಗಸ್ಟ್‌ನಲ್ಲಿ, ಕೇಂದ್ರ ಸರ್ಕಾರವು ವಿಧಿ 370ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ಅಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಪುನರ್ ಸಂಘಟಿಸಿತ್ತು.
ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕುಗಳು ಮತ್ತು ಘನತೆಯನ್ನು ಮರುಸ್ಥಾಪಿಸಿ ಎಂಬ ಭಿತ್ತಿಪತ್ರ ಹಿಡಿದಿದ್ದ ಅಬ್ದುಲ್ಲಾ, ಈ ಪ್ರತಿಭಟನೆಯು ರಾಜ್ಯತ್ವವನ್ನು ಮರುಸ್ಥಾಪಿಸಲು ಮತ್ತು ಜಮ್ಮು ಮತ್ತು ಕಾಶ್ಮೀರದ ಜನರ ಹಕ್ಕುಗಳನ್ನು ಮರಳಿ ಪಡೆಯಲು ಕೈಗೊಂಡಿರುವ ವಿಶಾಲ ಹೋರಾಟದ ಆರಂಭವಾಗಿದೆ ಎಂದು ಹೇಳಿದರು. ಪ್ರತಿಭಟನಾಕಾರರನ್ನು ಜಂತರ್ ಮಂತರ್‌ಗೆ ತಲುಪದಂತೆ ತಡೆಯಲಾಯಿತು ಮತ್ತು ಅವರ ಮೇಲೆ ಅಶ್ರುವಾಯು ಪ್ರಯೋಗಿಸಲಾಯಿತು ಎಂದು ಅವರು ಆರೋಪಿಸಿದರು.

ನಮ್ಮನ್ನು ಜಂತರ್ ಮಂತರ್‌ಗೆ ಹೋಗದಂತೆ ತಡೆಯಲಾಯಿತು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಅವಕಾಶ ನೀಡಲಿಲ್ಲ. ಆದರೆ ನಮ್ಮ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಇದು ನಮ್ಮ ರಾಜ್ಯತ್ವ, ನಮ್ಮ ಹಕ್ಕುಗಳು, ನಮ್ಮ ಘನತೆ ಮತ್ತು ನಮ್ಮಿಂದ ಕಸಿದುಕೊಳ್ಳಲಾದ ಎಲ್ಲದಕ್ಕಾಗಿ ನಮ್ಮ ಹೋರಾಟದ ಆರಂಭವಷ್ಟೇ ಎಂದು ಅಬ್ದುಲ್ಲಾ ಅವರು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *