ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ದರ್ಶನ್ ಗ್ಯಾಂಗ್ನ ಸುಹಾಸ್, ವೈಭವ್ ಮತ್ತು ಪುನೀತ್ ಎಂಬ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿದೆ.
ಈ ಮೂವರು ಆರೋಪಿಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ತುಮಕೂರಿನ ಬಾರ್ ಮಾಲೀಕ ಹಾಗೂ ಸಿಸಿಟಿವಿ ಡಿವಿಆರ್ ಸೀಜ್ಗೆ ಸಂಬಂಧಿಸಿದ ಸಾಕ್ಷಿ ಸಂದೀಪ್ ಎಂಬವರಿಗೆ ಸುಳ್ಳು ಸಾಕ್ಷಿ ಹೇಳುವಂತೆ ಆಮಿಷವೊಡ್ಡಿದ್ದಲ್ಲದೆ ವಾಟ್ಸಾಪ್ ಕರೆಗಳ ಮೂಲಕ ಬೆದರಿಕೆ ಹಾಕಿದ್ದರು ಎ ಎಂದಬ ಆರೋಪವಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈ ಮೂವರನ್ನು ಅರೆಸ್ಟ್ ಮಾಡಿ, ವಿಚಾರಣೆ ನಡೆಸಿ ಜೈಲಿಗೆ ಕಳಿಸಿದ್ದರು. ಮೊಬೈಲ್ಗಳನ್ನು ವಶಪಡಿಸಿಕೊಂಡು ವಿಧಿವಿಜ್ಞಾನ ಪರೀಕ್ಷೆಗೂ ಕಳುಹಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯವು, ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿ ಷರತ್ತುಬದ್ಧ ಜಾಮೀನು ನೀಡಿದೆ.


