Menu

ದೆಹಲಿ ಕೈತಪ್ಪಿದ ಬೆನ್ನಲ್ಲೇ ಪಂಜಾಬ್ ಉಳಿಸಿಕೊಳ್ಳಲು ಮುಂದಾದ ಆಪ್!

aravind kejriwal

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಕ್ಷ ಅಧಿಕಾರದಲ್ಲಿರುವ ಏಕೈಕ ರಾಜ್ಯವಾದ ಪಂಜಾಬ್ ನಲ್ಲಿ ಎಎಪಿ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ.

ಸುಮಾರು 30 ಎಎಪಿ ಶಾಸಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂಬ ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆಯ ನಂತರ ಮಂಗಳವಾರ ಸಭೆ ನಡೆಯಲಿದೆ.

ಪಂಜಾಬ್ ನಲ್ಲಿ ಎಎಪಿಯೊಳಗೆ ವಿಭಜನೆ ಮತ್ತು ರಾಜ್ಯ ಸರ್ಕಾರದಲ್ಲಿ ಪುನರ್ರಚನೆ ನಡೆಯಲಿದೆ ಎಂದು ವಿರೋಧ ಪಕ್ಷದ ನಾಯಕರು ಭವಿಷ್ಯ ನುಡಿದಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಪಂಜಾಬಲ್ಲಿ 2022ರ ವಿಧಾನಸಭಾ ಚುನಾವಣೆಯಲ್ಲಿ, ಎಎಪಿ 117 ಸ್ಥಾನಗಳಲ್ಲಿ 92 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್‌ನಿಂದ ಅಧಿಕಾರವನ್ನು ಕಸಿದುಕೊಂಡಿತ್ತು.

ಅಸೆಂಬ್ಲಿಯಲ್ಲಿ ಕಾಂಗ್ರೆಸ್ 18 ಸ್ಥಾನಗಳನ್ನು ಗೆದ್ದರೆ, ಶಿರೋಮಣಿ ಅಕಾಲಿ ದಳ ಮೂರು ಶಾಸಕರನ್ನು ಹೊಂದಿದೆ. ಅಲ್ಲಿ ಬಿಜೆಪಿಯು ಸೊನ್ನೆ ಸುತ್ತಿದೆ.

ರಾಜ್ಯಸಭೆಗೆ ಕೇಜ್ರಿವಾಲ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ರಾಜ್ಯಸಭೆಗೆ ಪ್ರವೇಶಿಸುವ ಮೂಲಕ ತಮ್ಮ ಹೋರಾಟ ಮುಂದುವರಿಸಲಿದ್ದಾರೆ.

ನವದೆಹಲಿ ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕೇಜ್ರಿವಾಲ್, ದೆಹಲಿಯ ಜನರ ಹಕ್ಕುಗಳಿಗಾಗಿ ಹೋರಾಡಲು ರಾಜ್ಯಸಭೆಗೆ ಹೋಗಬಹುದು ಎಂದು ಪಕ್ಷದ ವಲಯದಲ್ಲಿ ಮಾತು ಹರಡಿದೆ.

ಎಎಪಿ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ, ಆದರೆ ಕೇಜ್ರಿವಾಲ್ ರಾಜ್ಯಸಭೆಗೆ ಹೋಗುತ್ತಾರೆ ಎಂದು ಅವರ ಆಪ್ತರೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸೋತಿದ್ದರೂ, 2030ರವರೆಗೆ ಅದು ಇನ್ನೂ ಮೂರು ರಾಜ್ಯಸಭಾ ಸ್ಥಾನಗಳನ್ನು ಹೊಂದಿದೆ.

ಶೀಶ್ ಮಹಲ್‌ಗೆ ಬಿಜೆಪಿ ಸಿಎಂ ಹೋಗಲ್ಲ

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿಯಾಗಿ ವಾಸಿಸುತ್ತಿದ್ದ ಸಿವಿಲ್ ಲೈನ್ಸ್ನಲ್ಲಿರುವ ಫ್ಲ್ಯಾಗ್ ಸ್ಟಾಫ್ ರಸ್ತೆಯ ಬಂಗಲೆ ಶೀಶ್ ಮಹಲ್ ಅನ್ನು ದೆಹಲಿಯ ಹೊಸ ಮುಖ್ಯಮಂತ್ರಿ ಆಕ್ರಮಿಸುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಕೇಜ್ರಿವಾಲ್ ಅವರ ಅಧಿಕೃತ ಬಂಗಲೆಯ ನವೀಕರಣದಲ್ಲಿ ದೊಡ್ಡ ಹಗರಣ ನಡೆದಿದೆ ಎಂದು ಆರೋಪಿಸಲು ಭಾರತೀಯ ಜನತಾ ಪಕ್ಷ (ಬಿಜೆಪಿ) ‘ಶೀಶ್ ಮಹಲ್’ ಎಂಬ ಆಡುಮಾತಿನ ಹಿಂದಿ ಪದವನ್ನು ಬಳಸಿತ್ತು.

ದೆಹಲಿಯ 70ಸದಸ್ಯರ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ 26 ವರ್ಷಗಳ ನಂತರ ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಅಧಿಕಾರಕ್ಕೆ ಮರಳಿದೆ, ಇದು 2020 ರ 8 ಕ್ಕಿಂತ 40 ಹೆಚ್ಚಾಗಿದೆ.

Related Posts

Leave a Reply

Your email address will not be published. Required fields are marked *