Saturday, February 22, 2025
Menu

ಮತ್ತೆ ಕಾಂಗ್ರೆಸ್‌ ಕೈ ಹಿಡಿದ ಎಲ್​.ಆರ್‌ ಶಿವರಾಮೇಗೌಡ

ಮಾಜಿ ಸಂಸದ, ಮಾಜಿ ಶಾಸಕ ಎಲ್​.ಆರ್​.ಶಿವರಾಮೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು ಎಲ್.ಎಸ್.ಚೇತನ್ ಗೌಡ ಕಾಂಗ್ರೆಸ್ ಗೆ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್​ ಅವರನ್ನೆಲ್ಲ ಪಕ್ಷಕ್ಕೆ ಸ್ವಾಗತಿಸಿದರು.

ಎಲ್​ಆರ್​ ಶಿವರಾಮೇಗೌಡ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದರು. ಮರಳಿ ಕಾಂಗ್ರೆಸ್​ ಪಕ್ಷ ಸೇರಿಕೊಂಡಿದ್ದಾರೆ. ಕಾಂಗ್ರೆಸ್​ ತೊರೆದು ಆಮ್​ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದ ಬ್ರಿಜೇಶ್​ ಕಾಳಪ್ಪ ಕಾಂಗ್ರೆಸ್‌ಗೆ ವಾಪಸ್​ ಆಗಿದ್ದಾರೆ.

ಎಲ್​ ಆರ್ ಶಿವರಾಮೇಗೌಡ ಚನ್ನಪಟ್ಟಣ ಉಪಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಮಾಜಿ ಸಂಸದ ಜಿ. ಮಾದೇಗೌಡ ಅವರ ಬಗ್ಗೆ ಲಘುವಾಗಿ ಮಾತನಾಡಿ ಜೆಡಿಎಸ್​ನಿಂದ ಉಚ್ಚಾಟನೆಗೊಂಡಿದ್ದ ಶಿವರಾಮೇಗೌಡ ಅವರು 2023ರಲ್ಲಿ ಬಿಜೆಪಿ ಸೇರಿದ್ದರು. 1996ರಲ್ಲಿ ಜನತಾ ದಳದಲ್ಲಿದ್ದ ಶಿವರಾಮೇಗೌಡರು 1999ರವೇಳೆಗೆ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. 2009ರಲ್ಲಿ ಬಿಜೆಪಿ ಸೇರಿದ್ದ ಅವರು ಒಂದೇ ವರ್ಷದಲ್ಲಿ ಮತ್ತೆ ಕಾಂಗ್ರೆಸ್​ ಗೆ ಬಂದಿದ್ದರು. 2018ರಲ್ಲಿ ಜೆಡಿಎಸ್​ ಸೇರಿ, 2023 ಜೆಡಿಎಸ್​ನಿಂದ ಉಚ್ಚಾಟನೆಗೊಂಡು ಬಿಜೆಪಿಗೆ ಹೋದವರು ಇದೀಗ ಕಾಂಗ್ರೆಸ್​ಗೆ ಸೇರಿದ್ದಾರೆ.

Related Posts

Leave a Reply

Your email address will not be published. Required fields are marked *