ಹೊಸಪೇಟೆ ಮೂಲದ ಪ್ರಶಾಂತ್ ಎಂಬಾತ ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಸಾಯಿಸಿ, ನಾಲ್ಕು ವರ್ಷದ ಮಗುವನ್ನು ಕೊಂದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗೆ ಗುರಿಯಾಗಿದ್ದಾನೆ.
ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿಗೆ ಒಂದು ಲಕ್ಷ ದಂಡ ಕೂಡ ವಿಧಿಸಿದೆ. 51ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಸಿ.ಬಿ. ಸಂತೋಷ್ ತನಿಖಾಧಿಕಾರಿಗಳ ಪರ ಸರ್ಕಾರಿ ಅಭಿಯೋಜಕರಾಗಿ ಬಿ.ಎಚ್.ಭಾಸ್ಕರ್ ವಾದ ಮಂಡಿಸಿ ದ್ದರು.
ಬೇಗೂರು ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ನಲ್ಲಿ ಪತಿ ಹಾಗೂ ನಾಲ್ಕು ವರ್ಷದ ಹೆಣ್ಣು ಮಗುವಿಗೆನೊಂದಿಗೆ ನೆಲೆಸಿದ್ದ ಯಮುನಾ, ಔಷಧ ಮಾರಾಟ ಮಾಡು ತ್ತಿದ್ದರು. ಔಷಧ ಖರೀದಿ ವಿಚಾರವಾಗಿ ಆನ್ ಲೈನ್ ಮೂಲಕ ಅಪರಾಧಿ ಪ್ರಶಾಂತ್ ಆಕೆಯನ್ನು ಪರಿಚಯಿಸಿಕೊಂಡಿದ್ದು, ಸಂಪರ್ಕದಲ್ಲಿದ್ದ. 2021ರ ಅ.10ರಂದು ಔಷಧ ಖರೀದಿಸುವ ಸಲುವಾಗಿ ಹೊಸಪೇಟೆಯಿಂದ ರೈಲಿನ ಮೂಲಕ ನಗರಕ್ಕೆ ಬಂದಿದ್ದ ಪ್ರಶಾಂತ್, ಬೇಗೂರಿನ ಮನೆಯ ವಿಳಾಸ ಪಡೆದು ಆಕೆಯ ಮನೆಗೆ ಪ್ರಶಾಂತ್ ಬಂದಿದ್ದ. ತನ್ನೊಂದಿಗೆ ಲೈಂಗಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸಿದ್ದ. ಇದಕ್ಕೆ ಮಹಿಳೆ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದ. ಇದನ್ನು ಕಂಡ 4 ವರ್ಷದ ಮಗು ಜೋರಾಗಿ ಕಿರುಚಿಕೊಂಡಿತ್ತು. ಅಳು ಜೋರಾಗಿದ್ದರಿಂದ ಮಗುವಿನ ಕತ್ತು ಸೀಳಿ ಹತ್ಯೆ ಮಾಡಿದ್ದ. ಬಳಿಕ ರೈಲಿನಲ್ಲಿ ಹೊಸಪೇಟೆಗೆ ತೆರಳಿದ್ದ.
ಮೃತ ಮಹಿಳೆಯ ಪತಿ ನೀಡಿದ ದೂರು ಆಧರಿಸಿ ಬೇಗೂರು ಠಾಣೆ ಇನ್ ಸ್ಪೆಕ್ಟರ್ ಆಗಿದ್ದ ಶಿವಕುಮಾರ್ ಬಿ ಮುಚ್ಚಂಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು.