Menu
12

ರನ್ಯಾ ರಾವ್ ಜಾಮೀನು ಅರ್ಜಿ ವಜಾ, ನಾಳೆ ಪತಿಯ ಅರ್ಜಿ ವಿಚಾರಣೆ

ಚಿನ್ನ ಕಳ್ಳಸಾಗಾಣೆ ಮಾಡುವಾಗ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ದುಬೈನಿಂದ 14 ಕೆಜಿ ಚಿನ್ನವನ್ನು ಅಕ್ರಮವಾಗಿ ತರುವಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್ ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ರನ್ಯಾ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ನ್ಯಾಯಾಲಯ ತಿರಸ್ಕರಿಸಿತು.

ರನ್ಯಾ ರಾವ್ ಪ್ರಭಾವಿ ಆಗಿರುವುದರಿಂದ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ. ಅಲ್ಲದೇ ತನಿಖೆ ಇನ್ನೂ ಪ್ರಗತಿ ಹಂತದಲ್ಲಿ ಇರುವುದರಿಂದ ಜಾಮೀನು ನೀಡಬಾರದು ಎಂದು ಡಿಆರ್ ಐ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದರು.

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆಯಿಂದ ಶೇ.38ರಷ್ಟು ತೆರಿಗೆ ವಂಚನೆ ಆಗಿದೆ. ಇದರಿಂದ ಸರ್ಕಾರಕ್ಕೆ ಸುಮಾರು 5 ಕೋಟಿಯಷ್ಟು ತೆರಿಗೆ ಕೈ ತಪ್ಪಿದೆ ಎಂದು ಆರೋಪಿಸಲಾಯಿತು. ಈ ಹಿನ್ನೆಲೆಯಲ್ಲಿ ಜಾಮೀನು ಅರ್ಜಿಯನ್ನು ತಿರಸ್ಕರಿಸಲಾಯಿತು.

ಇದೇ ವೇಳೆ ರನ್ಯಾ ರಾವ್ ಪತಿ ಜತಿನ್ ಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ನಾಳೆ ಜತಿನ್ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.

Related Posts

Leave a Reply

Your email address will not be published. Required fields are marked *