Menu
12

ರಾಯಚೂರಿನಲ್ಲಿ ಖೋಟಾನೋಟು ಜಾಲ ಪತ್ತೆ: ಎಎಸ್ ಐ ಸೇರಿ ನಾಲ್ವರು ಅರೆಸ್ಟ್

fake note

ರಾಯಚೂರು: ಖೋಟಾ ನೋಟು ಜಾಲವನ್ನು ಭೇದಿಸಿರುವ ರಾಯಚೂರು ಪೊಲೀಸರು ಮಾಸ್ಟರ್ ಮೈಂಡ್ ಸಶಸ್ತ್ರ ಮೀಸಲು ಪಡೆಯ ಎಎಸ್ ಐ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಎಎಸ್ಐ ಮರಿಲಿಂಗ, ಸದ್ದಾಂ, ರಮೇಶ್ ಮತ್ತು ಶಿವಲಿಂಗ ಎಂದು ಗುರುತಿಸಲಾಗಿದೆ. ನಗರದ ಶಾಂತಿ ಕಾಲೋನಿಯ ಸದ್ದಾಂನ ಮನೆಯನ್ನು ಬಾಡಿಗೆ ಪಡೆದಿದ್ದ ಮರಿಲಿಂಗ ಅಲ್ಲಿಂದಲೇ ದಂಧೆ ನಡೆಸುತ್ತಿದ್ದ. ಈ ವಿಚಾರ ತಿಳಿದು ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಹೈದರಾಬಾದ್ನ ಕಿಂಗ್ಪಿನ್ ಮಾತಿನಂತೆ ಮರಿಲಿಂಗ ಟೀಂ ಈ ದಂಧೆಯನ್ನು ಮಾಡುತ್ತಿತ್ತು. ಗ್ಯಾಂಗ್ ಸದ್ದಾಂನಿಂದ 10 ಲಕ್ಷ ರೂ. ಹಣ ಪಡೆದು 30 ಲಕ್ಷ ರೂ. ಖೋಟಾ ನೋಟು ನೀಡುವ ವ್ಯವಹಾರ ಕುದುರಿತ್ತು. ಮೊದಲ ಹಂತವಾಗಿ ಸದ್ದಾಂ 4 ಲಕ್ಷ ರೂ. ನೀಡಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ದಾಳಿ ವೇಳೆ ವೈಟ್ ಪೇಪರ್ ಹಾಗೂ ಕಚ್ಚಾ ವಸ್ತುಗಳು, 4 ಲಕ್ಷ ರೂ. ನಗದು ಹಣ ಜಪ್ತಿ ಮಾಡಿದ್ದಾರೆ. ರಾಯಚೂರಿನ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ವರು ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Related Posts

Leave a Reply

Your email address will not be published. Required fields are marked *