Menu

ವಿಜಯಪುರದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ಸಾವು

ವಿಜಯಪುರದ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಉತ್ನಾಳದ ಬೀರಪ್ಪ ಗೋಡೆಕರ್(30), ಹಣಮಂತ ಕಡ್ಲಿಮಟ್ಟಿ(25) ಮತ್ತು ಜುಮನಾಳ ಗ್ರಾಮದ ಯಮನಪ್ಪ ನಾಟೀಕಾರ್(19) ಮೃತಪಟ್ಟವರು. ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ಕಾರು ತೆರಳುತ್ತಿದ್ದಾಗ ಚಾಲಕನ ಅತಿವೇಗದಿಂದ ಅಪಘಾತ ಸಂಭವಿಸಿದೆ.

ಶವಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಗಾಯಗೊಂಡಿರುವ ಉಮೇಶ್ ಭಜಂತ್ರಿ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *