Menu

ಹೆಸರು ಬದಲಾವಣೆಗೆ ಕೇಂದ್ರ ನಕಾರ: ಕಾನೂನು ನಮಗೂ ಗೊತ್ತು ಎಂದ ಡಿಸಿಎಂ

ರಾಮನಗರ ಜಿಲ್ಲೆ ಹೆಸರು ಬದಲಾವಣೆಯನ್ನು ಕೆಂದ್ರ ತಿರಸ್ಕರಿಸಿರುವ ಬಗ್ಗೆ ಕೇಳಿದಾಗ, “ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ರಾಜ್ಯದ ವಿಚಾರ. ನಮಗೂ ಕಾನೂನು ಗೊತ್ತಿದೆ. ಇದನ್ನು ಹೇಗೆ ಜಾರಿಗೆ ತರಬೇಕು ಎಂಬುದು ನಮಗೆ ಗೊತ್ತಿದೆ” ಎಂದು  ಡಿಸಿಎಂ ಡಿಕೆ ಶಿವಕುಮಾರ್‌  ಹೇಳಿದರು.

ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿ, ಇಲ್ಲಿ ಒಂದಷ್ಟು ಸಚಿವರು ಇದ್ದಾರಲ್ಲ ಅವರುಗಳು ಕೇಂದ್ರ ಗೃಹ ಸಚಿವರಿಗೆ ಹೇಳಿ ಹೆಸರು ಬದಲಾವಣೆ ಬೇಡ ಎಂದು ಬರೆಸಿದ್ದಾರೆ” ಎಂದರು. ಈ ವೇಳೆ ಕುಮಾರಸ್ವಾಮಿ ಅವರೇ ಎಂದು ಮರು ಪ್ರಶ್ನಿಸಿದಾಗ ‘ಇನ್ನ್ಯಾರು’ ಎಂದು ಹೆಸರು ಹೇಳದೆ ಛೇಡಿಸಿದರು. “ಈ ವಿಚಾರವಾಗಿ ಎಲ್ಲಾ ಇಲಾಖೆಗಳು ಧನಾತ್ಮಕವಾಗಿ ಸ್ಪಂದಿಸಿದ್ದವು. ಹಾಗೆ ನೋಡಿದರೆ ಇದರ ಅವಶ್ಯಕತೆಯೂ ಇಲ್ಲ” ಎಂದರು.

“ನೀವು ಹೆಸರು ಬದಲಾವಣೆ ಮಾಡಿಕೊಳ್ಳುವಾಗ ಒಂದು ಅಫಿಡವಿಟ್ ಮಾಡಿಕೊಂಡು ಬದಲಾವಣೆ ಮಾಡಿಕೊಳ್ಳಬಹುದಂತೆ. ಇದು ರಾಜ್ಯದ ವಿಷಯ. ದ್ವೇಷದ ರಾಜಕಾರಣ ಹೇಗೆ ನಡೆಯುತ್ತಿದೆ ಹಾಗೂ ರಾಮನಗರ ಜನತೆಯ ಮೇಲೆ ನಡೆಸುತ್ತಿರುವ ಗಧಾಪ್ರಹಾರಕ್ಕೆ ಇದೆಲ್ಲಾ ಸಾಕ್ಷಿ” ಎಂದು ವ್ಯಂಗ್ಯವಾಡಿದರು.

ನನ್ನ ಕೊಲೆಗೆ ಶಿವಕುಮಾರ್, ಸುರೇಶ್, ಹನುಮಂತರಾಯಪ್ಪ, ಕುಸುಮ ಸಂಚು ಹೂಡಿದ್ದಾರೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಕೇಳಿದಾಗ, “ದಿನಾ ಪೋಟೋ ಹಾಕಿಕೊಂಡು ನೋಡಿಕೊಳ್ಳಲು ಹೇಳಿ” ಎಂದು ಕುಟುಕಿದರು.

ಕಾಂಗ್ರೆಸ್ ‌ಭವನ ಭೂಮಿಪೂಜೆಗೆ ರಾಹುಲ್ ಗಾಂಧಿ: ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾ‌ನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ಪೂಜೆಗೆ ಸಮಯ ನೀಡಿ ಎಂದು ಹೇಳಿದ್ದೇನೆ. 100 ಕಾಂಗ್ರೆಸ್ ಕಚೇರಿಗಳನ್ನು ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅವರು ಸಮಯ ನೀಡಿದಾಗ ಭೂಮಿಪೂಜೆ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಉತ್ತರಿಸಿ, ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ವಿಚಾರವಾಗಿ ಹೈಕಮಾಂಡ್ ಬಳಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ, “ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದ್ದು, ವಿಧಾನಸಭೆ ಅಧಿವೇಶನ ಮುಗಿದ ನಂತರ ಎಲ್ಲಾ ಕ್ಷೇತ್ರಗಳಲ್ಲಿ ಸಭೆ ನಡೆಸಲಾಗುವುದು” ಎಂದರು.

ರಾಜ್ಯದ ಎಲ್ಲಾ ಬೆಳವಣಿಗೆಗಳು ಹೈಕಮಾಂಡಿನ ಗಮನದಲ್ಲಿವೆ. ಕಾರ್ಯಕರ್ತರ ಸಭೆ ವಿಚಾರವನ್ನು ತಿಳಿಸಲಾಗಿದೆ. ಸಭೆಯ ವರದಿಯನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ ಎಂದರು. ಅಧಿಕಾರ ಹಸ್ತಾಂತರ ವಿಚಾರವಾಗಿ ಚರ್ಚೆ ನಡೆಸಲಾಯಿತೇ ಎಂದು ಕೇಳಿದಾಗ, “ಈ ರೀತಿಯ ಯಾವ ಸುದ್ದಿಯೂ ಇಲ್ಲ,‌ ಏನೂ ಇಲ್ಲ. ನಾವು ಇದರ ಬಗ್ಗೆ ಯಾವ ವಿಚಾರವನ್ನೂ ಮಾತನಾಡಲು ಹೋಗುವುದಿಲ್ಲ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಿ ಎಂದಷ್ಟೇ ಹೈಕಮಾಂಡ್ ಹೇಳಿದೆ” ಎಂದು ತಿಳಿಸಿದರು. ಎಐಸಿಸಿ ಕಚೇರಿಗೆ ಭೇಟಿ ಕುರಿತು ಪ್ರಶ್ನಿಸಿದಾಗ “ದೆಹಲಿಗೆ ಬಂದಾಗಲೆಲ್ಲಾ ಪಕ್ಷದ ದೇವಾಲಯ ಎಐಸಿಸಿ ಕಚೇರಿಗೆ ಭೇಟಿ ನೀಡುತ್ತೇನೆ” ಎಂದರು.

Related Posts

Leave a Reply

Your email address will not be published. Required fields are marked *